ಮೈಸೂರು: ಮೈಸೂರಿನ ನಾಡನಹಳ್ಳಿ ಗ್ರಾಮದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವ ಮಹದೇವಪ್ಪ ಅವರು, ಅಂಬೇಡ್ಕರ್ ಅವರ ಗೌರವದ ಸಂಕೇತವಾಗಿ ಪ್ರತಿಮೆಗಳನ್ನು ನಿರ್ಮಿಸುತ್ತಿದ್ದೇವೆ. ನಮ್ಮ ಜನರು ಬಾಬಾ ಸಾಹೇಬರ ಮಾತನ್ನು ಅರ್ಥಮಾಡಿಕೊಂಡು ಶಿಕ್ಷಣ ಪಡೆದು, ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಈ ಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟು ಮೇಲ್ದರ್ಜೆಗೇರಿದೆ. ಆದರೂ ಇಲ್ಲಿ ಗ್ರಾಮಸ್ಥರಿಗೆ ಕೆಲವು ತೊಂದರೆ ಉಂಟಾಗುತ್ತಿದೆ. ಈ ಗ್ರಾಮದ ನಿರಾಶ್ರಿತರಿಗೆ ಆಶ್ರಯ ಯೋಜನೆಯಡಿ ನಿವೇಶನ ವಿತರಿಸಲು ಸಚಿವರೊಂದಿಗೆ ಮಾತನಾಡಿ ಕ್ರಮವಹಿಸಲಾಗುವುದು ಎಂದು ಹೇಳಿದರು.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…