ಮೈಸೂರು ನಗರ

2ನೇ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ತಾಯಿಯ ದರ್ಶನ ಪಡೆದು ನಾಡಿಗೆ ಹಾಗೂ ರೈತರಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ದಿಶಾ ಸಭೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿಗೆ ಒಳ್ಳೆದಾಗಲಿ ನನಗೆ ಮೈಸೂರಿನಲ್ಲಿ ಅಧಿಕಾರಿಗಳ ಸಭೆ ಇದೆ. ಹೀಗಾಗಿ ಅಲ್ಲಿಗೆ ಹೋಗಲು ಆಗಲ್ಲ. ಅವರು ಏನೇ ಯೋಜನೆ ತಂದರು ನಮ್ಮ ಬೆಂಬಲ ಇರುತ್ತದೆ. ಜಿಲ್ಲೆಗೆ , ರಾಜ್ಯಕ್ಕೆ ದೊಡ್ಡ ಮಂತ್ರಿ ಇದ್ದಾರೆ. ಜೋಶಿ, ಕುಮಾರಸ್ವಾಮಿ ಇಬ್ಬರು ಸೇರಿ ರಾಜ್ಯಕ್ಕೆ ಬರಬೇಕಾದ ಟ್ಯಾಕ್ಸ್ ಹಣ ಕೊಡಿಸಲಿ. ಅದನ್ನು ಬಿಟ್ಟು ಬರುವ ಎಂಪಿ ಹಣ ತಂದರೆ ಅದರಲ್ಲೇನು ವಿಶೇಷ ಇದೆ.? ಏನಾದ್ರೂ ವಿಶೇಷ ಅನುದಾನ ತಂದು ಅಭಿವೃದ್ದಿ ಮಾಡಲಿ ಎಂದು ಆಗ್ರಹಿಸಿದರು.

ಇನ್ನು ರಾಜ್ಯಕ್ಕೆ ರಣದೀಪ್‌ ಸಿಂಗ್‌ ಸುರ್ಜೇವಾಲ ಭೇಟಿಯಾಗಿ ಶಾಸಕರ ಜೊತೆ ಮಾತುಕತೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದು ಎರಡು ವರ್ಷ ಆಗಿದೆ. ಜನಪರವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಹೆಚ್ಚಿನ ಕೆಲಸ ಮಾಡಲು ಜನರ ಅಭಿಪ್ರಾಯ ಹೇಗಿದೆ ಎಂದು ಕೇಳಲು ಬಂದಿದ್ದರು. ಜೊತೆಗೆ ಶಾಸಕರ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಕೆಶಿ ಒಗ್ಗಟ್ಟಾಗಿದ್ದಾರೆ. ಯಾರೇ ಏನು ಮಾಡಿದ್ರು ಅವರ ಒಗ್ಗಟ್ಟು ಹೀಗೆ ಇರುತ್ತದೆ. 5 ವರ್ಷ ಇಬ್ಬರು ಹೀಗೆ ಇರ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

3 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

3 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

4 hours ago