ಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ಬೆದರಿಕೆ ಕರೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುವುದಕ್ಕೆ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಆರ್ಎಸ್ಎಸ್ ಬ್ಯಾನ್ ಬಗ್ಗೆ ಸಿಎಂಗೆ ಪತ್ರ ಬರೆದಿದ್ದಾರೆ. ಇದರ ಬಗ್ಗೆ ಸರ್ಕಾರ ತೀರ್ಮಾನವನ್ನು ತೆಗೆದುಕೊಳ್ಳಬೇಕು. ಅಲ್ಲಿಯವರೆಗೂ ಏನು ಹೇಳುವುದಕ್ಕೆ ಅಗುವುದಿಲ್ಲ ಎಂದರು.
ಇದನ್ನು ಓದಿ: ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಇನ್ನು ಜೆಡಿಎಸ್ ಶಾಸಕರಿಗೆ ಅನುದಾನ ತಾರತಮ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲರಿಗೂ ಅನುದಾನ ಕೊಡುತ್ತಿದ್ದೇವೆ. ಬಿಜೆಪಿ ಅವರು ಈ ಹಿಂದೆ ಏನು ಮಾಡಿದ್ರು ಅಂತ ಅವರು ನೆನಪು ಮಾಡಿಕೊಳ್ಳಲ್ಲಿ. ನಾವು ಆ ರೀತಿ ಯಾರಿಗೂ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದರು.
ಇನ್ನು ಐಟಿ ಕಂಪನಿಗಳು ಬೇರೆಡೆ ಸ್ಥಳಾಂತರವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಸ್ತೆ ಹಾಳಗಿದೆ ಎನ್ನುವ ಸಮಸ್ಯೆ ಇದ್ದರೆ ಇದನ್ನು ಸರಿ ಮಾಡುತ್ತೇವೆ. ಬೆಂಗಳೂರಿನ ಗುಂಡಿ ಮುಚ್ಚುವುದಕ್ಕೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅದೇಶ ನೀಡಿದ್ದಾರೆ. ಐಟಿ ಅವರ ಸಮಸ್ಯೆ ಏನಿದೆ ಅದನ್ನು ಬಗೆಹರಿಸುತ್ತೇವೆ. ಅವರಿಗೆ ತಿಳಿ ಹೇಳುವ ಕೆಲಸ ಮಾಡುತ್ತೇವೆ. ಕರ್ನಾಟಕಕ್ಕೆ ಯಾರೇ ಬಂದರು ಅವರಿಗೆ ಬಂಡವಾಳ ಹೂಡುವುದಕ್ಕೆ ಬೇಕಾದ ಸಹಾಯ ಮಾಡುತ್ತೇವೆ. ಗೂಗಲ್ ಅವರು ಅವರದ್ದೇ ಕಾರಣಕ್ಕೆ ಆಂಧ್ರಕ್ಕೆ ಹೋಗಿದ್ದಾರೆ. ಕೇವಲ ರಸ್ತೆ ವಿಚಾರಕ್ಕೆ ಅಲ್ಲಿಗೆ ಹೋಗಿಲ್ಲ. ಹಾಗಾಗಿದ್ರೆ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಮಾಡಿ 10 ಲಕ್ಷ ಕೋಟಿ ಹೂಡಿಕೆ ಮಾಡುವುದಕ್ಕೆ ಸಹಿ ಮಾಡುತ್ತಿರಲಿಲ್ಲ ಎಂದು ಹೇಳಿದರು.
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…