satish jarakihole
ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್ ಹಿಂದಿರುಗಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಈ ಗೌರವ ಡಾಕ್ಟರೇಟ್ ಪದವಿಯನ್ನು ನನಗೆ ಪ್ರಧಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇದೆ.
ಈ ಹಿನ್ನೆಲೆಯಲ್ಲಿ ತಾವು ಪ್ರೀತಿ ಪೂರ್ವಕವಾಗಿ ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ಮುಂದುವರೆದಂತೆ, ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸಬೇಡಿ. ಇದು ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದ್ದು, ತಾವು ಈ ನಿರ್ಧಾರವನ್ನು ಸ್ವಾಗತಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಕಳೆದ ಮಾರ್ಚ್.27ರಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…