ಮೈಸೂರು ನಗರ

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌ ಹೇಳಿದ್ದಾರೆ.

ಸಬರ್ಬನ್ ಬಸ್ ನಿಲ್ದಾಣದ ಬಳಿ ಮೂತ್ರ ವಿಸರ್ಜನೆ ತಡೆಗಟ್ಟಲು ಮಿರರ್ ಅಳವಡಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಜಾಗದಲ್ಲಿ ಸಾರ್ವಜನಿಕರು ಎಷ್ಟು ಹೇಳಿದರೂ ಮೂತ್ರ ವಿಸರ್ಜನೆ ಮಾಡೋದನ್ನು ಬಿಡುತ್ತಿರಲಿಲ್ಲ. ಪಾಲಿಕೆ ಸಿಬ್ಬಂದಿಗಳ ಜೊತೆ ಸಭೆ ಮಾಡುವಾಗ ಮಿರರ್ ಅಳವಡಿಕೆ ಬಗ್ಗೆ ಚರ್ಚೆ ಮಾಡಲಾಯಿತು. ಹೀಗಾದರೂ ತಡೆಗಟ್ಟಬಹುದಾ ಎಂದು ಪ್ರಾಯೋಗಿಕವಾಗಿ ಒಂದು ಪ್ರಯತ್ನ ಮಾಡೋಣ ಎಂದು ತೀರ್ಮಾನ ಮಾಡಲಾಯಿತು. ಅದು ತುಂಬಾನೆ ಯಶಸ್ವಿಯಾಗಿ ದೊಡ್ಡ ಸುದ್ದಿನೂ ಆಗಿದೆ. ಇದೇ ಪರಿಹಾರ ಅಲ್ಲ. ಜನಸಾಮಾನ್ಯರು ಸ್ವಯಂ ಪ್ರೇರಣೆಯಿಂದಲೇ ಬದಲಾಗಬೇಕು. ನಾಗರಿಕ ಪ್ರಜ್ಞೆ ಎನ್ನುವುದನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ಮಾಡುವುದನ್ನು ತಪ್ಪಿಸಲು ಗಿಡ ನೆಡುವುದು, ಚಿತ್ರಗಳನ್ನು ಬಿಡಿಸುವುದು ಮತ್ತು ಬೇರೆ ಬೇರೆ ಕಾರ್ಯಕ್ರಮಗಳ ಮೂಲಕ ತಡೆಗಟ್ಟುವ ಕೆಲಸ ಮಾಡಿದ್ದೆವು. ಆದರೂ ಆಗ ಇದನ್ನು ಪ್ರಾಯೋಗಿಕ ಮಾಡಿದ್ದೇವೆ. ಅನಿವಾರ್ಯ ಬಿದ್ದರೆ ಬೇರೆ ಕಡೆಯೂ ಅಳವಡಿಸುವ ಬಗ್ಗೆ ಸಾರ್ವಜನಿಕರ, ತಜ್ಞರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು.

ಇನ್ನು ಇ- ಟಾಯ್ಲೆಟ್ ಮತ್ತು ಸ್ಥಗಿತ ಆಗಿರುವ ಸಾರ್ವಜನಿಕ ಶೌಚಾಲಯ ಪುನರಾರಂಭ ಮಾಡಲು ಕ್ರಮ ವಹಿಸಲಾಗಿದೆ. ಈಗಾಗಲೇ ಸ್ಥಗಿತವಾಗಿರುವ ಸುಮಾರು 112 ಶೌಚಾಲಯಗಳನ್ನು ಪುನರಾಂಭ ಮಾಡಲಾಗಿದೆ. ಇನ್ನು ಕೆಲವು ಕಡೆ ನಿರ್ವಹಣೆ ಮಾಡಲು ಅತ್ಯಂತ ಕಡಿಮೆ ಬಿಡ್ ಸಾರಿದರೂ ಯಾರೂ ಮುಂದೆ ಬರ್ತಾ ಇಲ್ಲ. ಇ- ಟಾಯ್ಲೆಟ್‌ಗಳದ್ದು ಇದೇ ಸಮಸ್ಯೆ. ಅವಶ್ಯಕತೆ ಇಲ್ಲ ಎನ್ನುವ ಕಡೆ ನಿರುಪಯುಕ್ತವಾಗಿ ಬಿದ್ದಿವೆ. ಕೆಲವು ಕಡೆ ನೀರು ಮತ್ತು ಎಲೆಕ್ಟ್ರಿಕಲ್ ಸಮಸ್ಯೆಯಿಂದ ದುರಸ್ತಿಗೊಂಡಿವೆ. ನಿರ್ವಹಣೆಗೆ ಯಾರೂ ಮುಂದೆ ಬಾರದ ಕಾರಣ ನೆನೆಗುದಿಗೆ ಬಿದ್ದಿವೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ವಹಣೆಗೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

55 mins ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

17 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

17 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

22 hours ago