ಮೈಸೂರು ನಗರ

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ: ಪ್ರತಿಭಟನೆ

ಮೈಸೂರು: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್.ಸಿ, ಎಸ್.ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ ಶುಕ್ರವಾರ(ಜು.12) ಪ್ರತಿಭಟನೆ ನಡೆಸಿದರು.

ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರಿಗೆ ಮೀಸಲ್ಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಸಚಿನ್, ದಲಿತರ ಹಣವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಲ್ಲದೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶೇಕಡ 60 ಕ್ಕಿಂತ ಹೆಚ್ಚಿನ ಅಂಕ ಪಡೆದ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಪ್ರಸಕ್ತ ಸಾಲಿನಿಂದ ಶೇಕಡ 75 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವಂತೆ ಆದೇಶ ಹೊರಡಿಸಿದ್ದು ಇಂದರಿಂದಾಗಿ ಅನೇಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾಲೇಜುಗಳ ಪ್ರವೇಶಾತಿ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಮುಂಗಡ ಶುಲ್ಕ ಕಟ್ಟದೆಯೇ ಪ್ರವೇಶ ಪಡೆಯಬಹುದು ಎಂದು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಎಷ್ಟು ಕಾಲೇಜುಗಳಲ್ಲಿ ಜಾರಿ ಮಾಡಲಾಗಿದೆ? ಎಂದು ಪ್ರಶ್ನಿಸಿದ ಅವರು, ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ದಲಿತ ವಿರೋಧಿ ನೀತಿಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ನವೀನ್ ಕೋಳೂರು, ಗಿರೀಶ್ ಬೆಂಡರವಾಡಿ, ಮುತ್ತುರಾಜ್, ರೋಹಿತ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

2 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

2 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

2 hours ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

2 hours ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

2 hours ago