ಮೈಸೂರು ನಗರ

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ, ನಾನು ದಲಿತ ವಿರೋಧಿಯಲ್ಲ ಎಂದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ವಿಧಾನಸಭೆಯಲ್ಲಿ ನಾನು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು, ಯಾವುದೇ ಕಾರಣಕ್ಕೂ ದಲಿತರನ್ನು ವಿರೋಧಿಸಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1970ನೇ ಇಸವಿಯಿಂದಲೂ ಸಹಕಾರಿ ಕ್ಷೇತ್ರದಲ್ಲಿ ಕಾರ್ಯದರ್ಶಿ ಅಗಿ ನಂತರ ಅಧ್ಯಕ್ಷನಾಗಿ ಸೇವೆ ಸಲ್ಲಿಸಿಕೊಂಡು ಬಂದಿದ್ದೇನೆ. ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಸೇವೆಯನ್ನು ಸಲ್ಲಿಸಿದ್ದೇನೆ. ವಿಧಾನಸಭೆಯಲ್ಲಿ ನಾನು ಹೇಳಿದ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಿದೆ ಎಂದು ಹೇಳಿದ್ದೇನೆ. ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಅದನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ.

ನಾನು ದಲಿತ ವಿರೋಧಿಯಲ್ಲ. ಸಹಕಾರ ಸಂಘಗಳಿಗೆ ಸರ್ಕಾರದಿಂದ ಅನುದಾನ ಬರುವುದಿಲ್ಲ. ಸಹಕಾರ ಕ್ಷೇತ್ರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಈ ರೀತಿ ಮಾಡುವ ಬದಲು ಸಹಕಾರ ಕ್ಷೇತ್ರವನ್ನು ಮುಚ್ಚಿಬಿಡಿ ಎಂದು ಹೇಳಿದ್ದೆ. ದಲಿತರು ಬಂದ್ರೆ ಮುಚ್ಚಬೇಕಾ ಎಂದು ಶಿವರಾಜ್ ತಂಗಡಗಿ ಹೇಳಿದರು. ನಾನು ನಮ್ಮ ತಂದೆ ಈ ಹಿಂದೆ ದಲಿತರಿಗೆ ಒಂದು ಊರನ್ನೆ ಕಟ್ಟಿಕೊಟ್ಟಿದ್ದೇವೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ದಲಿತರ ಮನೆಯಲ್ಲಿ ವಾಸ್ತವ್ಯ ಮಾಡಿಸಿದ್ದೇನೆ. ನಾನು ಯಾವತ್ತು ಜಾತಿ ಮಾಡಿಲ್ಲ. ದಲಿತರನ್ನು ಅಗೌರವವಾಗಿ ಖಂಡಿಲ್ಲ. ಅಡಳಿತ ಪಕ್ಷ ತಂದಿದ್ದ ಕಾಯ್ದೆಯನ್ನು ವಿರೋಧ ಮಾಡಿದ್ದೇನೆ. ಅದನ್ನು ದಲಿತರ ವಿರೋಧಿ ಎಂಬ ರೀತಿ ಬಿಂಬಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಷಡ್ಯಂತ್ರ ಎಂದು ಕಾಂಗ್ರೆಸ್‌ನವರೇ ಹೇಳಿದ್ದಾರೆ. ಸರ್ಕಾರ ಎಸ್‌ಐಟಿ ತನಿಖೆ ಮಾಡಿಸುತ್ತಿದೆ. ಧರ್ಮಸ್ಥಳಕ್ಕೆ ಅಂಟಿರುವ ಕಳಂಕ ಹೋಗಬೇಕು. ಧರ್ಮಸ್ಥಳಕ್ಕೆ ದೇಶ ವಿದೇಶಗಳಿಂದ ಭಕ್ತರು ಬರುತ್ತಾರೆ. ಕನ್ನಡನಾಡಿಗೆ ಹಾಗೂ ಜನರಿಗೆ ನೋವಾಗಿದೆ. ಆದ್ದರಿಂದ ತನಿಖೆ ಶೀಘ್ರವಾಗಿ ನಡೆಸಬೇಕು. ತಪ್ಪಿಸ್ಥತರನ್ನು ನೇಣಿಗೆ ಹಾಕಬೇಕು. ಜನರ ಮನಸ್ಸಿಗೆ ನೆಮ್ಮದಿ ನೀಡಬೇಕು. ಧರ್ಮಸ್ಥಳ ಯಾವುದೇ ಕಾರಣಕ್ಕೂ ಟಾರ್ಗೆಟ್ ಆಗಲ್ಲ. ವೀರೇಂದ್ರ ಹೆಗಡೆ ಕೂಡ ಟಾರ್ಗೆಟ್ ಆಗಲ್ಲ. ಸತ್ಯ ಹೊರ ಬರುತ್ತೆ ಸತ್ಯವೇ ಉಳಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಲೇಖಕಿ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಿವರ್ಷ ಒಬ್ಬೊಬ್ಬ ಸಾಧಕರಿಂದ ಉದ್ಘಾಟನೆ ಮಾಡಿಸುತ್ತಾರೆ. ಅದಕ್ಕಾಗಿ ಒಂದು ಹೈ ಪವರ್ ಕಮಿಟಿ ಮಾಡಿದ್ದೇವೆ. ಸಿಎಂಗೆ ಅದರ ಪವರ್ ಕೊಟ್ಟಿದ್ದೇವೆ. ಭಾನು ಮುಸ್ತಾಕ್ ಆಯ್ಕೆ ಮಾಡಿರೋದು ಸಿಎಂ ಎಂದು ಹೇಳಿದರು.

ಇನ್ನು ಬಾನು ಮುಷ್ತಾಕ್‌ಗೆ ದೇವರ ಮೇಲೆ ನಂಬಿಕೆ ಇಲ್ಲ ಎಂಬ ಬಿಜೆಪಿ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಚಾಮುಂಡೇಶ್ವರಿ ಮೇಲೆ ನಂಬಿಕೆ ಇಲ್ಲದೆ ಇದ್ರೆ ಅವರು ಬರಲ್ಲ. ನಂಬಿಕೆ ಇದ್ರೆ ಬಂದು ಉದ್ಘಾಟನೆ ಮಾಡ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

7 seconds ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

51 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

1 hour ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

2 hours ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

2 hours ago