mla harish gowda reaction
ಮೈಸೂರು: ಬೆಳಗಾವಿ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಗೌಡ ಪ್ರತಿಕ್ರಿಯೆ ನೀಡಿದ್ದು, ಸಿಎಂ ನಡೆ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಮಾಧ್ಯಮಗಳ ಸೃಷ್ಟಿ ಅಷ್ಟೇ. ಮಾಧ್ಯಮಗಳು ತಪ್ಪಾಗಿ ತಿರುಚಿವೆ. ಸಿಎಂ ಅವರು ಪೊಲೀಸ್ ಅಧಿಕಾರಿಯ ಮೇಲೆ ಯಾವುದೇ ರೀತಿಯಲ್ಲೂ ಅನುಚಿತವಾಗಿ ನಡೆದುಕೊಂಡಿಲ್ಲ.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯ ಏಕೆ ಅಷ್ಟೊಂದು ಉದ್ವೇಗಕ್ಕೆ ಒಳಗಾದರು ಎಂಬುದು ಗೊತ್ತಿಲ್ಲ: ಸಚಿವ ಜಿ.ಪರಮೇಶ್ವರ್
ಸಹಜವಾಗಿ ಒಂದು ಶಿಷ್ಟಾಚಾರ ಸೂಕ್ತ ಭದ್ರತಾ ನಿಯೋಜನೆ ಮಾಡದೆ ಸಮಾವೇಶದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಸಮಾವೇಶಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸುವ ಕೆಲಸವನ್ನ ಮಾಡಿದ್ದರು. ಅದಕ್ಕೆ ಸಿಎಂ ಅವರು ಸಹಜವಾಗಿ ಪೋಲಿಸ್ ಭದ್ರತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.ಕೈ ತೋರಿಸಿ ಪೋಲಿಸ್ ಅಧಿಕಾರಿ ಮೇಲೆ ಸಿಟ್ಟು ತೋರಿಸಿದ್ದಾರೆ. ಕೆಲವು ಮಾಧ್ಯಮಗಳು ಅದನ್ನೇ ತಪ್ಪಾಗಿ ತೋರಿಸಿವೆ. ಆ ಸಂಧರ್ಭದಲ್ಲಿ ಸಹಜವಾಗಿ ಸಿಎಂ ಪ್ರತಿಕ್ರಿಯಿಸಿದ್ದಾರೆ. ಅದೇ ಜಾಗದಲ್ಲಿ ಯಾರೇ ಇದ್ದರೂ ಅದನ್ನೇ ಮಾಡುತ್ತಿದ್ದರು ಎಂದು ಸಿಎಂ ಸಿದ್ದರಾಮಯ್ಯ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…