ಮೈಸೂರು : ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಲ್ಲಿ ಮೃತಪಟ್ಟವರೆಲ್ಲಾ ತುಂಬ ಚಿಕ್ಕ ವಯಸ್ಸಿನವರು. ಹೀಗಾಗಿ ಸರ್ಕಾರ ಪರಿಹಾರವನ್ನು 10 ರಿಂದ 25 ಲಕ್ಷಕ್ಕೆ ಏರಿಕೆ ಮಾಡಿದೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ನಗರದಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ನಡೆಯಬಾರದಿತ್ತು. ನಡೆದು ಹೋಗಿದೆ. ಟೀಕೆ ಮಾಡೊರೆಲ್ಲಾ ಮಾಡಲಿ. ಮೃತ ಕುಟುಂಬಗಳಿಗೆ ಸರ್ಕಾರ ಏನು ಮಾಡಬೇಕು ಅದನ್ನೆಲ್ಲಾ ಮಡುತ್ತಿದೆ ಎಂದು ಹೇಳಿದರು.
ಸಾವಿನಲ್ಲೂ ರಾಜಕೀಯ ಮಾಡೊರೋ ಮೂರ್ಖರು. ವಾಸ್ತವಾಂಶ ಜನರಿಗೆ ಗೊತ್ತಿದೆ. ಅನಿರೀಕ್ಷಿತವಾಗಿ ನಡೆದಿರುವ ಘಟನೆಯನ್ನು ವಿಪಕ್ಷದವರು ದೊಡ್ಡದು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತ ಆಗಲಿಲ್ವಾ.? ನಾವೇನಾದ್ರೂ ಕೇಳಿದ್ವಾ.? ಪೆಹಲ್ಗಾಮ್ ನಲ್ಲಿ ನಡೆದ ಘಟನೆಯ ಇವರ ವೈಫಲ್ಯ ನಾವು ಪ್ರಶ್ನಿಸಿದ್ವಾ.? ಏನೋ ಆಗ ಬಾರದ ಘಟನೆ ಆಗೋಗಿದೆ ಅದಕ್ಕೆ ಎಲ್ಲರ ವಿಷಾದವಿದೆ ಎಂದರು.
ಎಚ್.ಡಿ ಕುಮಾರಸ್ವಾಮಿ ಅವರಿಗೆ ಡಿಕೆ ಶಿವಕುಮಾರ್ ಕನಸಿನಲ್ಲೂ ದುಸ್ವಪ್ನವಾಗಿ ಕಾಡುತ್ತಿದ್ದಾರೆ. ಅದಕ್ಕೆ ಯಾವಾಗ ನೋಡಿದ್ರು ಡಿಕೆಶಿ ಅವರ ಜಪ ಮಾಡುತ್ತಿರುವುದು. ಎಲ್ಲಿ ಹೋಗಲಿ ಬರಲಿ ಡಿಕೆಶಿ ಅವರನ್ನೇ ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದಾರೆ. ಇವರ ಟೀಕೆಗಳಿಗೆ ನಮ್ಮ ಡಿಸಿಎಂ ಡಿಕೆಶಿ ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…