ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್.2ರಲ್ಲಿ ಶಾಸಕ ಕೆ.ಹರೀಶ್ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು.
ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್ಗೆ ಭೇಟಿ ನೀಡಲಿರುವ ಶಾಸಕ ಹರೀಶ್ ಗೌಡ ಅವರು, ಇಂದು ಬೆಳಿಗ್ಗೆ ವಾರ್ಡ್ ನಂಬರ್ 2ಕ್ಕೆ ಭೇಟಿ ನೀಡಿ ಮಂಚೇಗೌಡನಕೊಪ್ಪಲಿನ ಜನರ ಸಮಸ್ಯೆ ಆಲಿಸಿದರು.
ಉಮಾಮಹೇಶ್ವರಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು, ಸರ್ಕಾರಿ ಪ್ರೌಢಶಾಲೆಯ ಹಿಂಭಾಗದ ರಸ್ತೆ ಮಾರ್ಗವಾಗಿ ಪ್ರತಿಮ ನ್ಯಾಯಬೆಲೆ ಅಂಗಡಿ, ಮರಿಗೌಡರ ಮನೆ ಮುಂದಿನ ರಸ್ತೆ, ಸಂಗಮ್ ವೃತ್ತದ ಆಟದ ಮೈದಾನದ ಕಡೆ ಸಾಗಿತು. ಬಳಿಕ ಶಾಸಕ ಹರೀಶ್ ಗೌಡ ಅವರು, ಸ್ಥಳದಲ್ಲಿದ್ದ ಸ್ಥಳೀಯ ಒಳಚರಂಡಿಯನ್ನು ಪರಿಶೀಲನೆ ನಡೆಸಿದರು.
ಪ್ರಮುಖ ವೃತ್ತಗಳ ಬಳಿ ಸಾರ್ವಜನಿಕ ಸಭೆ ನಡೆಸಿದ ಅವರು, ಜನರಿಂದ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಾರ್ಡ್ನಲ್ಲಿ ಯುಜಿಡಿ ಹಳೆಯದಾಗಿದ್ದು, ಅನೇಕ ಸಮಸ್ಯೆಗಳಿರುವ ಬಗ್ಗೆ ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…