ಮೈಸೂರು ನಗರ

ವಾರ್ಡ್‌ ನಂ.2ರಲ್ಲಿ ಪಾದಯಾತ್ರೆ ನಡೆಸಿ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್‌ ನಂಬರ್.‌2ರಲ್ಲಿ ಶಾಸಕ ಕೆ.ಹರೀಶ್‌ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು.

ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್‌ಗೆ ಭೇಟಿ ನೀಡಲಿರುವ ಶಾಸಕ ಹರೀಶ್‌ ಗೌಡ ಅವರು, ಇಂದು ಬೆಳಿಗ್ಗೆ ವಾರ್ಡ್‌ ನಂಬರ್‌ 2ಕ್ಕೆ ಭೇಟಿ ನೀಡಿ ಮಂಚೇಗೌಡನಕೊಪ್ಪಲಿನ ಜನರ ಸಮಸ್ಯೆ ಆಲಿಸಿದರು.

ಉಮಾಮಹೇಶ್ವರಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು, ಸರ್ಕಾರಿ ಪ್ರೌಢಶಾಲೆಯ ಹಿಂಭಾಗದ ರಸ್ತೆ ಮಾರ್ಗವಾಗಿ ಪ್ರತಿಮ ನ್ಯಾಯಬೆಲೆ ಅಂಗಡಿ, ಮರಿಗೌಡರ ಮನೆ ಮುಂದಿನ ರಸ್ತೆ, ಸಂಗಮ್‌ ವೃತ್ತದ ಆಟದ ಮೈದಾನದ ಕಡೆ ಸಾಗಿತು. ಬಳಿಕ ಶಾಸಕ ಹರೀಶ್‌ ಗೌಡ ಅವರು, ಸ್ಥಳದಲ್ಲಿದ್ದ ಸ್ಥಳೀಯ ಒಳಚರಂಡಿಯನ್ನು ಪರಿಶೀಲನೆ ನಡೆಸಿದರು.

ಪ್ರಮುಖ ವೃತ್ತಗಳ ಬಳಿ ಸಾರ್ವಜನಿಕ ಸಭೆ ನಡೆಸಿದ ಅವರು, ಜನರಿಂದ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಾರ್ಡ್‌ನಲ್ಲಿ ಯುಜಿಡಿ ಹಳೆಯದಾಗಿದ್ದು, ಅನೇಕ ಸಮಸ್ಯೆಗಳಿರುವ ಬಗ್ಗೆ ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

19 mins ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

30 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

42 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

1 hour ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

1 hour ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

2 hours ago