ಮೈಸೂರು ನಗರ

ವಾರ್ಡ್‌ ನಂ.2ರಲ್ಲಿ ಪಾದಯಾತ್ರೆ ನಡೆಸಿ ಜನರ ಸಮಸ್ಯೆ ಆಲಿಸಿದ ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್‌ ನಂಬರ್.‌2ರಲ್ಲಿ ಶಾಸಕ ಕೆ.ಹರೀಶ್‌ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು.

ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್‌ಗೆ ಭೇಟಿ ನೀಡಲಿರುವ ಶಾಸಕ ಹರೀಶ್‌ ಗೌಡ ಅವರು, ಇಂದು ಬೆಳಿಗ್ಗೆ ವಾರ್ಡ್‌ ನಂಬರ್‌ 2ಕ್ಕೆ ಭೇಟಿ ನೀಡಿ ಮಂಚೇಗೌಡನಕೊಪ್ಪಲಿನ ಜನರ ಸಮಸ್ಯೆ ಆಲಿಸಿದರು.

ಉಮಾಮಹೇಶ್ವರಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು, ಸರ್ಕಾರಿ ಪ್ರೌಢಶಾಲೆಯ ಹಿಂಭಾಗದ ರಸ್ತೆ ಮಾರ್ಗವಾಗಿ ಪ್ರತಿಮ ನ್ಯಾಯಬೆಲೆ ಅಂಗಡಿ, ಮರಿಗೌಡರ ಮನೆ ಮುಂದಿನ ರಸ್ತೆ, ಸಂಗಮ್‌ ವೃತ್ತದ ಆಟದ ಮೈದಾನದ ಕಡೆ ಸಾಗಿತು. ಬಳಿಕ ಶಾಸಕ ಹರೀಶ್‌ ಗೌಡ ಅವರು, ಸ್ಥಳದಲ್ಲಿದ್ದ ಸ್ಥಳೀಯ ಒಳಚರಂಡಿಯನ್ನು ಪರಿಶೀಲನೆ ನಡೆಸಿದರು.

ಪ್ರಮುಖ ವೃತ್ತಗಳ ಬಳಿ ಸಾರ್ವಜನಿಕ ಸಭೆ ನಡೆಸಿದ ಅವರು, ಜನರಿಂದ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಾರ್ಡ್‌ನಲ್ಲಿ ಯುಜಿಡಿ ಹಳೆಯದಾಗಿದ್ದು, ಅನೇಕ ಸಮಸ್ಯೆಗಳಿರುವ ಬಗ್ಗೆ ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago