ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್.2ರಲ್ಲಿ ಶಾಸಕ ಕೆ.ಹರೀಶ್ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು.
ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್ಗೆ ಭೇಟಿ ನೀಡಲಿರುವ ಶಾಸಕ ಹರೀಶ್ ಗೌಡ ಅವರು, ಇಂದು ಬೆಳಿಗ್ಗೆ ವಾರ್ಡ್ ನಂಬರ್ 2ಕ್ಕೆ ಭೇಟಿ ನೀಡಿ ಮಂಚೇಗೌಡನಕೊಪ್ಪಲಿನ ಜನರ ಸಮಸ್ಯೆ ಆಲಿಸಿದರು.
ಉಮಾಮಹೇಶ್ವರಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು, ಸರ್ಕಾರಿ ಪ್ರೌಢಶಾಲೆಯ ಹಿಂಭಾಗದ ರಸ್ತೆ ಮಾರ್ಗವಾಗಿ ಪ್ರತಿಮ ನ್ಯಾಯಬೆಲೆ ಅಂಗಡಿ, ಮರಿಗೌಡರ ಮನೆ ಮುಂದಿನ ರಸ್ತೆ, ಸಂಗಮ್ ವೃತ್ತದ ಆಟದ ಮೈದಾನದ ಕಡೆ ಸಾಗಿತು. ಬಳಿಕ ಶಾಸಕ ಹರೀಶ್ ಗೌಡ ಅವರು, ಸ್ಥಳದಲ್ಲಿದ್ದ ಸ್ಥಳೀಯ ಒಳಚರಂಡಿಯನ್ನು ಪರಿಶೀಲನೆ ನಡೆಸಿದರು.
ಪ್ರಮುಖ ವೃತ್ತಗಳ ಬಳಿ ಸಾರ್ವಜನಿಕ ಸಭೆ ನಡೆಸಿದ ಅವರು, ಜನರಿಂದ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಾರ್ಡ್ನಲ್ಲಿ ಯುಜಿಡಿ ಹಳೆಯದಾಗಿದ್ದು, ಅನೇಕ ಸಮಸ್ಯೆಗಳಿರುವ ಬಗ್ಗೆ ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…