ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂಬರ್.2ರಲ್ಲಿ ಶಾಸಕ ಕೆ.ಹರೀಶ್ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು.
ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್ಗೆ ಭೇಟಿ ನೀಡಲಿರುವ ಶಾಸಕ ಹರೀಶ್ ಗೌಡ ಅವರು, ಇಂದು ಬೆಳಿಗ್ಗೆ ವಾರ್ಡ್ ನಂಬರ್ 2ಕ್ಕೆ ಭೇಟಿ ನೀಡಿ ಮಂಚೇಗೌಡನಕೊಪ್ಪಲಿನ ಜನರ ಸಮಸ್ಯೆ ಆಲಿಸಿದರು.
ಉಮಾಮಹೇಶ್ವರಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು, ಸರ್ಕಾರಿ ಪ್ರೌಢಶಾಲೆಯ ಹಿಂಭಾಗದ ರಸ್ತೆ ಮಾರ್ಗವಾಗಿ ಪ್ರತಿಮ ನ್ಯಾಯಬೆಲೆ ಅಂಗಡಿ, ಮರಿಗೌಡರ ಮನೆ ಮುಂದಿನ ರಸ್ತೆ, ಸಂಗಮ್ ವೃತ್ತದ ಆಟದ ಮೈದಾನದ ಕಡೆ ಸಾಗಿತು. ಬಳಿಕ ಶಾಸಕ ಹರೀಶ್ ಗೌಡ ಅವರು, ಸ್ಥಳದಲ್ಲಿದ್ದ ಸ್ಥಳೀಯ ಒಳಚರಂಡಿಯನ್ನು ಪರಿಶೀಲನೆ ನಡೆಸಿದರು.
ಪ್ರಮುಖ ವೃತ್ತಗಳ ಬಳಿ ಸಾರ್ವಜನಿಕ ಸಭೆ ನಡೆಸಿದ ಅವರು, ಜನರಿಂದ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ವಾರ್ಡ್ನಲ್ಲಿ ಯುಜಿಡಿ ಹಳೆಯದಾಗಿದ್ದು, ಅನೇಕ ಸಮಸ್ಯೆಗಳಿರುವ ಬಗ್ಗೆ ಸಾರ್ವಜನಿಕರು ದೂರಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…