ಮೈಸೂರು ನಗರ

ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ರಾಜ್ಯ ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ. ಪೂರ್ವ ತಯಾರಿ ಕೊರತೆಯಿಂದಾಗಿ ಅವಘಡವಾಗಿದ್ದು, ಸರ್ಕಾರ ಘಟನೆಯ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ಇನ್ನು 11 ಮಂದಿ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಮೃತರ ಕುಟುಂಬಕ್ಕೆ ಆಗಿರುವ ನೋವಿನ ಶಾಪ ಇವರಿಗೆ ತಟ್ಟುತ್ತೆ. ನಿನ್ನೆಯ ಕಾರ್ಯಕ್ರಮ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಂತೆ ಕಾಣುತ್ತಿತ್ತು. ಅವರ ಮಕ್ಕಳು, ಮೊಮ್ಮಕ್ಕಳಿಗೆ ಆಟಗಾರರ ಜೊತೆ ಫೋಟೋ ತೆಗೆಸಿಕೊಳ್ಳಲು ಅವಕಾಶ ಕೊಟ್ಟಿದ್ದರು. ಹೀಗಾಗಿ ಸಾವಿನ ಹೊಣೆಯನ್ನು ಸಿಎಂ ಹಾಗೂ ಡಿಸಿಎಂ ಅವರೇ ಹೊರಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:- ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಡಿಸಿಎಂ ಡಿಕೆಶಿ ಕಾರಣ: ಜೆಡಿಎಸ್‌ ಆರೋಪ

ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಮರ್ಯಾದೆಯನ್ನು ದೇಶದಲ್ಲಿ ಕಳೆದಿದ್ದಾರೆ. ಬೇರೆ ರಾಜ್ಯಗಳಲ್ಲಿ ಐಪಿಎಲ್ ಕಪ್ ಗೆದ್ದಾಗ ವ್ಯವಸ್ಥಿತವಾಗಿ ಮಾಡಿದ್ದಾರೆ. ಈಗಾಗಲೇ ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ ಹಾಗೂ ಗೃಹ ಮಂತ್ರಿಗಳು ರಾಜೀನಾಮೆ ಕೊಡಬೇಕಿತ್ತು. ಮಹಾಕುಂಭಮೇಳದಲ್ಲಿ ಆದ ಘಟನೆ ಕುರಿತು ಕಾಂಗ್ರೆಸ್ ಆರೋಪ ಮಾಡಿತ್ತು. ಆದರೆ ನಿನ್ನೆ ಪೊಲೀಸ್ ಭದ್ರತೆಯನ್ನು ಸರಿಯಾಗಿ ಮಾಡದೇ ಸಂಭ್ರಮಾಚರಣೆಗೆ ಆಹ್ವಾನ ಮಾಡಿರುವುದು ಅವೈಜ್ಞಾನಿಕ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

18 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

18 hours ago