mla shrivathsa
ಮೈಸೂರು: ರಾಜ್ಯ ಸರ್ಕಾರವೇ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊರಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿದೆ. ಪೂರ್ವ ತಯಾರಿ ಕೊರತೆಯಿಂದಾಗಿ ಅವಘಡವಾಗಿದ್ದು, ಸರ್ಕಾರ ಘಟನೆಯ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.
ಇನ್ನು 11 ಮಂದಿ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಮೃತರ ಕುಟುಂಬಕ್ಕೆ ಆಗಿರುವ ನೋವಿನ ಶಾಪ ಇವರಿಗೆ ತಟ್ಟುತ್ತೆ. ನಿನ್ನೆಯ ಕಾರ್ಯಕ್ರಮ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಂತೆ ಕಾಣುತ್ತಿತ್ತು. ಅವರ ಮಕ್ಕಳು, ಮೊಮ್ಮಕ್ಕಳಿಗೆ ಆಟಗಾರರ ಜೊತೆ ಫೋಟೋ ತೆಗೆಸಿಕೊಳ್ಳಲು ಅವಕಾಶ ಕೊಟ್ಟಿದ್ದರು. ಹೀಗಾಗಿ ಸಾವಿನ ಹೊಣೆಯನ್ನು ಸಿಎಂ ಹಾಗೂ ಡಿಸಿಎಂ ಅವರೇ ಹೊರಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:- ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣಕ್ಕೆ ಡಿಸಿಎಂ ಡಿಕೆಶಿ ಕಾರಣ: ಜೆಡಿಎಸ್ ಆರೋಪ
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಮರ್ಯಾದೆಯನ್ನು ದೇಶದಲ್ಲಿ ಕಳೆದಿದ್ದಾರೆ. ಬೇರೆ ರಾಜ್ಯಗಳಲ್ಲಿ ಐಪಿಎಲ್ ಕಪ್ ಗೆದ್ದಾಗ ವ್ಯವಸ್ಥಿತವಾಗಿ ಮಾಡಿದ್ದಾರೆ. ಈಗಾಗಲೇ ನೈತಿಕ ಹೊಣೆ ಹೊತ್ತು ಸಿಎಂ, ಡಿಸಿಎಂ ಹಾಗೂ ಗೃಹ ಮಂತ್ರಿಗಳು ರಾಜೀನಾಮೆ ಕೊಡಬೇಕಿತ್ತು. ಮಹಾಕುಂಭಮೇಳದಲ್ಲಿ ಆದ ಘಟನೆ ಕುರಿತು ಕಾಂಗ್ರೆಸ್ ಆರೋಪ ಮಾಡಿತ್ತು. ಆದರೆ ನಿನ್ನೆ ಪೊಲೀಸ್ ಭದ್ರತೆಯನ್ನು ಸರಿಯಾಗಿ ಮಾಡದೇ ಸಂಭ್ರಮಾಚರಣೆಗೆ ಆಹ್ವಾನ ಮಾಡಿರುವುದು ಅವೈಜ್ಞಾನಿಕ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…
ಮಂಜು ಕೋಟೆ ಗುರುವಾರ ಚುನಾವಣೆ: ಅಧಿಕಾರ ಹಿಡಿಯಲು ಪಕ್ಷಗಳ ಪೈಪೋಟಿ; ಜನರಲ್ಲಿ ಕುತೂಹಲ ಹೆಚ್.ಡಿ.ಕೋಟೆ: ಬಿಜೆಪಿ-ಜಾ.ದಳ ಮೈತ್ರಿ ಮತ್ತು ಕಾಂಗ್ರೆಸ್…
ಮಹೇಂದ್ರ ಹಸಗೂಲಿ ಗ್ರಾಮಸ್ಥರಿಗೆ ನಿತ್ಯ ಎರಡು ಕಿ.ಮೀ. ಬಸ್ಗಾಗಿ ನಡೆದುಕೊಂಡು ಹೋಗಬೇಕಾದ ದುಸ್ಥಿತಿ ಗುಂಡ್ಲುಪೇಟೆ: ತಾಲ್ಲೂಕಿನ ಮೈಸೂರು-ಊಟಿ ಹೆದ್ದಾರಿಯ ಮಾರ್ಗದಲ್ಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…