ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ನಿವೇಶನ ಹಿಂತಿರುಗಿಸಿದ ಬಗ್ಗೆ ಶಾಸಕ ಶ್ರೀವತ್ಸ ಕಿಡಿ

 

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ ಬದಲು 3 ತಿಂಗಳುಗಳ ಹಿಂದೆಯೇ ನೀಡಿದ್ದರೆ ರಾಜ್ಯ ಮಾನ ಉಳಿಯುತ್ತಿತ್ತು. ಅಲ್ಲದೇ ಈ ನಿರ್ಧಾರವನ್ನು ಮೊದಲೇ ತೆಗೆದುಕೊಂಡಿದ್ದರೆ ಇನ್ನೂ ಹಲವಾರನ್ನು ಬಲಿಯಾಕಬಹುದಿತ್ತು. ಆಗ ಅವಕಾಶಗಳನ್ನು ಬಿಟ್ಟು ಬಿಟ್ಟರು. ಆದರೆ ಈಗ ಈ ನಿರ್ಧಾರವನ್ನು ಯಾಕೆ ತೀರ್ಮಾನಿಸಬೇಕಿತ್ತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌, ಮುಖಂಡರು ಹಾಗೂ ಕಾರ್ಯಕರ್ತರಿಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.

ಮುಡಾ ಹಗರಣದಲ್ಲಿ 14 ಸೈಟ್‌ಗಳು ಮಾತ್ರ ಸಿದ್ದರಾಮಯ್ಯ ಅವರ ಕಣ್ಣಿಗೆ ಮುಖ್ಯವಾಗಿ ಕಂಡು ಅವುಗಳನ್ನು ಉಳಿಸಿಕೊಳ್ಳಲು ಹೋಗಿ ಬಾಕಿ ಇನ್ನುಳಿದ 4,865 ನಿವೇಶನಗಳ ತನಿಖೆಯನ್ನು ಯಾರು ನಡೆಸುತ್ತಾರೆ. ನಾವು ಮುಡಾದಲ್ಲಿನ 14 ಸೈಟ್‌ಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮೊದಲೇ ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ನಿಮ್ಮನ್ನು ಉಪಯೋಗಿಸಿಕೊಳ್ಳತ್ತಿದ್ದಾರೆ ಎಂದು ಆದರೆ ಸಿದ್ದರಾಮಯ್ಯ ನಮ್ಮ ಮಾತನ್ನು ಕೇಳಲೇ ಇಲ್ಲ. ಸಿಎಂ ಸಿದ್ದರಾಮಯ್ಯ ಯಾಕೆ ಮುಡಾದ 14 ನಿವೇಶನಗಳಲ್ಲಿ ಮುಡಾ ಆಯುಕ್ತ ನಟೇಶ್‌ ಕುಮಾರ್‌ ಬಗ್ಗೆ ಕ್ರಮ ತೆಗೆದುಕೊಳ್ಳಲಿಲ್ಲ. ಅವರೇಕೆ ದಿನೇಶ್‌ ಕುಮಾರ್‌ ಅವರ ಅಮಾನತ್ತನ್ನು ವಾಪಾಸ್‌ ತೆಗೆದುಕೊಂಡರೂ? ಇದರಿಂದಲೇ ತಿಳಿಯುತ್ತದೆ. ಸರ್ಕಾರದಿಂದ ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿ ಅವರೇ ಸಿಕ್ಕಿ ಬೀಳುತ್ತಿದ್ದಾರೆ. ಮುಡಾದ 14 ನಿವೇಶನಗಳನ್ನು ಹಿಂತಿರುಗಿಸಿರುವುದು ಒಳ್ಳೆಯದೇ ಆದರೆ ಸಮಯ ಸರಿ ಆಗಿಲ್ಲ ಎಂದರು.

ಮಧ್ಯಪ್ರದೇಶ ವಿ/ಎಸ್‌ ಲಕ್ಷ್ಮೀನಾರಾಯಣ ಎಂಬ 2019ರ ಕೇಸ್‌ನಲ್ಲಿ ಸುಪ್ರೀಕೋರ್ಟ್‌ ಸ್ಪಷ್ಟವಾಗಿ ಒಬ್ಬ ಸಾರ್ವಜನಿಕ ಅಧಿಕಾರಿ ಹಾಗು ಮತ್ತೊಬ್ಬರು ಜಂಟಿಯಾಗಬಹುದೇ ಹೊರತು ಕೇಸ್‌ನಲ್ಲಿ ಆಗಲು ಸಾಧ್ಯವಿಲ್ಲ. ಹೀಗಾಗಿ ಆ ಕೇಸ್‌ನಂತೆಯೇ ಸಿಎಂ ಸಿದ್ದರಾಮಯ್ಯನವರೇ ನೀವಾಗಿ ನೀವೇ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರೆ ತಪ್ಪಲಾಗರಾದು ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಕಳೆದ ಹತ್ತು ವರ್ಷಗಳಿಂದ ಮುಡಾದಲ್ಲಿ ರಿಯಲ್‌ ಎಸ್ಟೇಟ್‌ ದಂಧೆ ತಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾರಿಗೂ ಮುಡಾದಲ್ಲಿ ಸೈಟ್‌ಗಳು ದೊರೆತ್ತಿಲ್ಲ. 14 ನಿವೇಶನಗಳಲ್ಲದೇ ಇನ್ನುಳಿದ ನಿವೇಶನಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಶ್ರೀವತ್ಸ ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

6 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

7 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

7 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

8 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

8 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago