ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ನಿವೇಶನ ಹಿಂತಿರುಗಿಸಿದ ಬಗ್ಗೆ ಶಾಸಕ ಶ್ರೀವತ್ಸ ಕಿಡಿ

 

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ ಬದಲು 3 ತಿಂಗಳುಗಳ ಹಿಂದೆಯೇ ನೀಡಿದ್ದರೆ ರಾಜ್ಯ ಮಾನ ಉಳಿಯುತ್ತಿತ್ತು. ಅಲ್ಲದೇ ಈ ನಿರ್ಧಾರವನ್ನು ಮೊದಲೇ ತೆಗೆದುಕೊಂಡಿದ್ದರೆ ಇನ್ನೂ ಹಲವಾರನ್ನು ಬಲಿಯಾಕಬಹುದಿತ್ತು. ಆಗ ಅವಕಾಶಗಳನ್ನು ಬಿಟ್ಟು ಬಿಟ್ಟರು. ಆದರೆ ಈಗ ಈ ನಿರ್ಧಾರವನ್ನು ಯಾಕೆ ತೀರ್ಮಾನಿಸಬೇಕಿತ್ತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌, ಮುಖಂಡರು ಹಾಗೂ ಕಾರ್ಯಕರ್ತರಿಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.

ಮುಡಾ ಹಗರಣದಲ್ಲಿ 14 ಸೈಟ್‌ಗಳು ಮಾತ್ರ ಸಿದ್ದರಾಮಯ್ಯ ಅವರ ಕಣ್ಣಿಗೆ ಮುಖ್ಯವಾಗಿ ಕಂಡು ಅವುಗಳನ್ನು ಉಳಿಸಿಕೊಳ್ಳಲು ಹೋಗಿ ಬಾಕಿ ಇನ್ನುಳಿದ 4,865 ನಿವೇಶನಗಳ ತನಿಖೆಯನ್ನು ಯಾರು ನಡೆಸುತ್ತಾರೆ. ನಾವು ಮುಡಾದಲ್ಲಿನ 14 ಸೈಟ್‌ಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮೊದಲೇ ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ನಿಮ್ಮನ್ನು ಉಪಯೋಗಿಸಿಕೊಳ್ಳತ್ತಿದ್ದಾರೆ ಎಂದು ಆದರೆ ಸಿದ್ದರಾಮಯ್ಯ ನಮ್ಮ ಮಾತನ್ನು ಕೇಳಲೇ ಇಲ್ಲ. ಸಿಎಂ ಸಿದ್ದರಾಮಯ್ಯ ಯಾಕೆ ಮುಡಾದ 14 ನಿವೇಶನಗಳಲ್ಲಿ ಮುಡಾ ಆಯುಕ್ತ ನಟೇಶ್‌ ಕುಮಾರ್‌ ಬಗ್ಗೆ ಕ್ರಮ ತೆಗೆದುಕೊಳ್ಳಲಿಲ್ಲ. ಅವರೇಕೆ ದಿನೇಶ್‌ ಕುಮಾರ್‌ ಅವರ ಅಮಾನತ್ತನ್ನು ವಾಪಾಸ್‌ ತೆಗೆದುಕೊಂಡರೂ? ಇದರಿಂದಲೇ ತಿಳಿಯುತ್ತದೆ. ಸರ್ಕಾರದಿಂದ ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿ ಅವರೇ ಸಿಕ್ಕಿ ಬೀಳುತ್ತಿದ್ದಾರೆ. ಮುಡಾದ 14 ನಿವೇಶನಗಳನ್ನು ಹಿಂತಿರುಗಿಸಿರುವುದು ಒಳ್ಳೆಯದೇ ಆದರೆ ಸಮಯ ಸರಿ ಆಗಿಲ್ಲ ಎಂದರು.

ಮಧ್ಯಪ್ರದೇಶ ವಿ/ಎಸ್‌ ಲಕ್ಷ್ಮೀನಾರಾಯಣ ಎಂಬ 2019ರ ಕೇಸ್‌ನಲ್ಲಿ ಸುಪ್ರೀಕೋರ್ಟ್‌ ಸ್ಪಷ್ಟವಾಗಿ ಒಬ್ಬ ಸಾರ್ವಜನಿಕ ಅಧಿಕಾರಿ ಹಾಗು ಮತ್ತೊಬ್ಬರು ಜಂಟಿಯಾಗಬಹುದೇ ಹೊರತು ಕೇಸ್‌ನಲ್ಲಿ ಆಗಲು ಸಾಧ್ಯವಿಲ್ಲ. ಹೀಗಾಗಿ ಆ ಕೇಸ್‌ನಂತೆಯೇ ಸಿಎಂ ಸಿದ್ದರಾಮಯ್ಯನವರೇ ನೀವಾಗಿ ನೀವೇ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರೆ ತಪ್ಪಲಾಗರಾದು ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಕಳೆದ ಹತ್ತು ವರ್ಷಗಳಿಂದ ಮುಡಾದಲ್ಲಿ ರಿಯಲ್‌ ಎಸ್ಟೇಟ್‌ ದಂಧೆ ತಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾರಿಗೂ ಮುಡಾದಲ್ಲಿ ಸೈಟ್‌ಗಳು ದೊರೆತ್ತಿಲ್ಲ. 14 ನಿವೇಶನಗಳಲ್ಲದೇ ಇನ್ನುಳಿದ ನಿವೇಶನಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಶ್ರೀವತ್ಸ ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ರಾಜ್ಯ ಕಾಂಗ್ರೆಸ್‌ನ ಗೊಂದಲ, ವರಿಷ್ಠರ ಪ್ಲಾನ್ ವಿಫಲ

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…

1 hour ago

ಮದ್ಯವ್ಯಸನಕ್ಕೆ ಸಿಲುಕಿದ ಆದಿವಾಸಿಗಳು ; ಆಡಳಿತ ವರ್ಗ ಅರಿವು ಮೂಡಿಸಲಿ

ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ…

1 hour ago

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

14 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

15 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

16 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

16 hours ago