ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ನಿವೇಶನ ಹಿಂತಿರುಗಿಸಿದ ಬಗ್ಗೆ ಶಾಸಕ ಶ್ರೀವತ್ಸ ಕಿಡಿ

 

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ ಬದಲು 3 ತಿಂಗಳುಗಳ ಹಿಂದೆಯೇ ನೀಡಿದ್ದರೆ ರಾಜ್ಯ ಮಾನ ಉಳಿಯುತ್ತಿತ್ತು. ಅಲ್ಲದೇ ಈ ನಿರ್ಧಾರವನ್ನು ಮೊದಲೇ ತೆಗೆದುಕೊಂಡಿದ್ದರೆ ಇನ್ನೂ ಹಲವಾರನ್ನು ಬಲಿಯಾಕಬಹುದಿತ್ತು. ಆಗ ಅವಕಾಶಗಳನ್ನು ಬಿಟ್ಟು ಬಿಟ್ಟರು. ಆದರೆ ಈಗ ಈ ನಿರ್ಧಾರವನ್ನು ಯಾಕೆ ತೀರ್ಮಾನಿಸಬೇಕಿತ್ತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌, ಮುಖಂಡರು ಹಾಗೂ ಕಾರ್ಯಕರ್ತರಿಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.

ಮುಡಾ ಹಗರಣದಲ್ಲಿ 14 ಸೈಟ್‌ಗಳು ಮಾತ್ರ ಸಿದ್ದರಾಮಯ್ಯ ಅವರ ಕಣ್ಣಿಗೆ ಮುಖ್ಯವಾಗಿ ಕಂಡು ಅವುಗಳನ್ನು ಉಳಿಸಿಕೊಳ್ಳಲು ಹೋಗಿ ಬಾಕಿ ಇನ್ನುಳಿದ 4,865 ನಿವೇಶನಗಳ ತನಿಖೆಯನ್ನು ಯಾರು ನಡೆಸುತ್ತಾರೆ. ನಾವು ಮುಡಾದಲ್ಲಿನ 14 ಸೈಟ್‌ಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮೊದಲೇ ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ನಿಮ್ಮನ್ನು ಉಪಯೋಗಿಸಿಕೊಳ್ಳತ್ತಿದ್ದಾರೆ ಎಂದು ಆದರೆ ಸಿದ್ದರಾಮಯ್ಯ ನಮ್ಮ ಮಾತನ್ನು ಕೇಳಲೇ ಇಲ್ಲ. ಸಿಎಂ ಸಿದ್ದರಾಮಯ್ಯ ಯಾಕೆ ಮುಡಾದ 14 ನಿವೇಶನಗಳಲ್ಲಿ ಮುಡಾ ಆಯುಕ್ತ ನಟೇಶ್‌ ಕುಮಾರ್‌ ಬಗ್ಗೆ ಕ್ರಮ ತೆಗೆದುಕೊಳ್ಳಲಿಲ್ಲ. ಅವರೇಕೆ ದಿನೇಶ್‌ ಕುಮಾರ್‌ ಅವರ ಅಮಾನತ್ತನ್ನು ವಾಪಾಸ್‌ ತೆಗೆದುಕೊಂಡರೂ? ಇದರಿಂದಲೇ ತಿಳಿಯುತ್ತದೆ. ಸರ್ಕಾರದಿಂದ ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿ ಅವರೇ ಸಿಕ್ಕಿ ಬೀಳುತ್ತಿದ್ದಾರೆ. ಮುಡಾದ 14 ನಿವೇಶನಗಳನ್ನು ಹಿಂತಿರುಗಿಸಿರುವುದು ಒಳ್ಳೆಯದೇ ಆದರೆ ಸಮಯ ಸರಿ ಆಗಿಲ್ಲ ಎಂದರು.

ಮಧ್ಯಪ್ರದೇಶ ವಿ/ಎಸ್‌ ಲಕ್ಷ್ಮೀನಾರಾಯಣ ಎಂಬ 2019ರ ಕೇಸ್‌ನಲ್ಲಿ ಸುಪ್ರೀಕೋರ್ಟ್‌ ಸ್ಪಷ್ಟವಾಗಿ ಒಬ್ಬ ಸಾರ್ವಜನಿಕ ಅಧಿಕಾರಿ ಹಾಗು ಮತ್ತೊಬ್ಬರು ಜಂಟಿಯಾಗಬಹುದೇ ಹೊರತು ಕೇಸ್‌ನಲ್ಲಿ ಆಗಲು ಸಾಧ್ಯವಿಲ್ಲ. ಹೀಗಾಗಿ ಆ ಕೇಸ್‌ನಂತೆಯೇ ಸಿಎಂ ಸಿದ್ದರಾಮಯ್ಯನವರೇ ನೀವಾಗಿ ನೀವೇ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರೆ ತಪ್ಪಲಾಗರಾದು ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಕಳೆದ ಹತ್ತು ವರ್ಷಗಳಿಂದ ಮುಡಾದಲ್ಲಿ ರಿಯಲ್‌ ಎಸ್ಟೇಟ್‌ ದಂಧೆ ತಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾರಿಗೂ ಮುಡಾದಲ್ಲಿ ಸೈಟ್‌ಗಳು ದೊರೆತ್ತಿಲ್ಲ. 14 ನಿವೇಶನಗಳಲ್ಲದೇ ಇನ್ನುಳಿದ ನಿವೇಶನಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಶ್ರೀವತ್ಸ ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

5 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

5 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

6 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

6 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

6 hours ago