ಮೈಸೂರು ನಗರ

ಮುಡಾ ಹಗರಣ: ಸಿಎಂ ಪತ್ನಿ ನಿವೇಶನ ಹಿಂತಿರುಗಿಸಿದ ಬಗ್ಗೆ ಶಾಸಕ ಶ್ರೀವತ್ಸ ಕಿಡಿ

 

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್‌.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ ಬದಲು 3 ತಿಂಗಳುಗಳ ಹಿಂದೆಯೇ ನೀಡಿದ್ದರೆ ರಾಜ್ಯ ಮಾನ ಉಳಿಯುತ್ತಿತ್ತು. ಅಲ್ಲದೇ ಈ ನಿರ್ಧಾರವನ್ನು ಮೊದಲೇ ತೆಗೆದುಕೊಂಡಿದ್ದರೆ ಇನ್ನೂ ಹಲವಾರನ್ನು ಬಲಿಯಾಕಬಹುದಿತ್ತು. ಆಗ ಅವಕಾಶಗಳನ್ನು ಬಿಟ್ಟು ಬಿಟ್ಟರು. ಆದರೆ ಈಗ ಈ ನಿರ್ಧಾರವನ್ನು ಯಾಕೆ ತೀರ್ಮಾನಿಸಬೇಕಿತ್ತು. ಇದರಿಂದ ಕಾಂಗ್ರೆಸ್‌ ಹೈಕಮಾಂಡ್‌, ಮುಖಂಡರು ಹಾಗೂ ಕಾರ್ಯಕರ್ತರಿಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.

ಮುಡಾ ಹಗರಣದಲ್ಲಿ 14 ಸೈಟ್‌ಗಳು ಮಾತ್ರ ಸಿದ್ದರಾಮಯ್ಯ ಅವರ ಕಣ್ಣಿಗೆ ಮುಖ್ಯವಾಗಿ ಕಂಡು ಅವುಗಳನ್ನು ಉಳಿಸಿಕೊಳ್ಳಲು ಹೋಗಿ ಬಾಕಿ ಇನ್ನುಳಿದ 4,865 ನಿವೇಶನಗಳ ತನಿಖೆಯನ್ನು ಯಾರು ನಡೆಸುತ್ತಾರೆ. ನಾವು ಮುಡಾದಲ್ಲಿನ 14 ಸೈಟ್‌ಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮೊದಲೇ ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ನಿಮ್ಮನ್ನು ಉಪಯೋಗಿಸಿಕೊಳ್ಳತ್ತಿದ್ದಾರೆ ಎಂದು ಆದರೆ ಸಿದ್ದರಾಮಯ್ಯ ನಮ್ಮ ಮಾತನ್ನು ಕೇಳಲೇ ಇಲ್ಲ. ಸಿಎಂ ಸಿದ್ದರಾಮಯ್ಯ ಯಾಕೆ ಮುಡಾದ 14 ನಿವೇಶನಗಳಲ್ಲಿ ಮುಡಾ ಆಯುಕ್ತ ನಟೇಶ್‌ ಕುಮಾರ್‌ ಬಗ್ಗೆ ಕ್ರಮ ತೆಗೆದುಕೊಳ್ಳಲಿಲ್ಲ. ಅವರೇಕೆ ದಿನೇಶ್‌ ಕುಮಾರ್‌ ಅವರ ಅಮಾನತ್ತನ್ನು ವಾಪಾಸ್‌ ತೆಗೆದುಕೊಂಡರೂ? ಇದರಿಂದಲೇ ತಿಳಿಯುತ್ತದೆ. ಸರ್ಕಾರದಿಂದ ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿ ಅವರೇ ಸಿಕ್ಕಿ ಬೀಳುತ್ತಿದ್ದಾರೆ. ಮುಡಾದ 14 ನಿವೇಶನಗಳನ್ನು ಹಿಂತಿರುಗಿಸಿರುವುದು ಒಳ್ಳೆಯದೇ ಆದರೆ ಸಮಯ ಸರಿ ಆಗಿಲ್ಲ ಎಂದರು.

ಮಧ್ಯಪ್ರದೇಶ ವಿ/ಎಸ್‌ ಲಕ್ಷ್ಮೀನಾರಾಯಣ ಎಂಬ 2019ರ ಕೇಸ್‌ನಲ್ಲಿ ಸುಪ್ರೀಕೋರ್ಟ್‌ ಸ್ಪಷ್ಟವಾಗಿ ಒಬ್ಬ ಸಾರ್ವಜನಿಕ ಅಧಿಕಾರಿ ಹಾಗು ಮತ್ತೊಬ್ಬರು ಜಂಟಿಯಾಗಬಹುದೇ ಹೊರತು ಕೇಸ್‌ನಲ್ಲಿ ಆಗಲು ಸಾಧ್ಯವಿಲ್ಲ. ಹೀಗಾಗಿ ಆ ಕೇಸ್‌ನಂತೆಯೇ ಸಿಎಂ ಸಿದ್ದರಾಮಯ್ಯನವರೇ ನೀವಾಗಿ ನೀವೇ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರೆ ತಪ್ಪಲಾಗರಾದು ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಕಳೆದ ಹತ್ತು ವರ್ಷಗಳಿಂದ ಮುಡಾದಲ್ಲಿ ರಿಯಲ್‌ ಎಸ್ಟೇಟ್‌ ದಂಧೆ ತಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾರಿಗೂ ಮುಡಾದಲ್ಲಿ ಸೈಟ್‌ಗಳು ದೊರೆತ್ತಿಲ್ಲ. 14 ನಿವೇಶನಗಳಲ್ಲದೇ ಇನ್ನುಳಿದ ನಿವೇಶನಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಶ್ರೀವತ್ಸ ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago