ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಒಂದು ದೊಡ್ಡ ಸಂಚಲನವನ್ನು ಸೃಷ್ಠಿಸಿದ್ದು, ಮುಡಾದ 14 ನಿವೇಶನಗಳನ್ನು ವಾಪಾಸ್ ನೀಡಿರುವ ಬಗ್ಗೆ ಶಾಸಕ ಟಿ.ಎಸ್.ಶ್ರೀವತ್ಸವ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮುಡಾ ಹಗರಣದಿಂದ ಕರ್ನಾಟಕದ ಮಾನ-ಗೌರವ ಹೋಗಿದೆ. ಈಗ ನಿವೇಶನವನ್ನು ವಾಪಸ್ಸು ನೀಡುವ ಬದಲು 3 ತಿಂಗಳುಗಳ ಹಿಂದೆಯೇ ನೀಡಿದ್ದರೆ ರಾಜ್ಯ ಮಾನ ಉಳಿಯುತ್ತಿತ್ತು. ಅಲ್ಲದೇ ಈ ನಿರ್ಧಾರವನ್ನು ಮೊದಲೇ ತೆಗೆದುಕೊಂಡಿದ್ದರೆ ಇನ್ನೂ ಹಲವಾರನ್ನು ಬಲಿಯಾಕಬಹುದಿತ್ತು. ಆಗ ಅವಕಾಶಗಳನ್ನು ಬಿಟ್ಟು ಬಿಟ್ಟರು. ಆದರೆ ಈಗ ಈ ನಿರ್ಧಾರವನ್ನು ಯಾಕೆ ತೀರ್ಮಾನಿಸಬೇಕಿತ್ತು. ಇದರಿಂದ ಕಾಂಗ್ರೆಸ್ ಹೈಕಮಾಂಡ್, ಮುಖಂಡರು ಹಾಗೂ ಕಾರ್ಯಕರ್ತರಿಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.
ಮುಡಾ ಹಗರಣದಲ್ಲಿ 14 ಸೈಟ್ಗಳು ಮಾತ್ರ ಸಿದ್ದರಾಮಯ್ಯ ಅವರ ಕಣ್ಣಿಗೆ ಮುಖ್ಯವಾಗಿ ಕಂಡು ಅವುಗಳನ್ನು ಉಳಿಸಿಕೊಳ್ಳಲು ಹೋಗಿ ಬಾಕಿ ಇನ್ನುಳಿದ 4,865 ನಿವೇಶನಗಳ ತನಿಖೆಯನ್ನು ಯಾರು ನಡೆಸುತ್ತಾರೆ. ನಾವು ಮುಡಾದಲ್ಲಿನ 14 ಸೈಟ್ಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮೊದಲೇ ಎಚ್ಚರಿಕೆ ನೀಡಿದ್ದೇವೆ. ಇದರಲ್ಲಿ ನಿಮ್ಮನ್ನು ಉಪಯೋಗಿಸಿಕೊಳ್ಳತ್ತಿದ್ದಾರೆ ಎಂದು ಆದರೆ ಸಿದ್ದರಾಮಯ್ಯ ನಮ್ಮ ಮಾತನ್ನು ಕೇಳಲೇ ಇಲ್ಲ. ಸಿಎಂ ಸಿದ್ದರಾಮಯ್ಯ ಯಾಕೆ ಮುಡಾದ 14 ನಿವೇಶನಗಳಲ್ಲಿ ಮುಡಾ ಆಯುಕ್ತ ನಟೇಶ್ ಕುಮಾರ್ ಬಗ್ಗೆ ಕ್ರಮ ತೆಗೆದುಕೊಳ್ಳಲಿಲ್ಲ. ಅವರೇಕೆ ದಿನೇಶ್ ಕುಮಾರ್ ಅವರ ಅಮಾನತ್ತನ್ನು ವಾಪಾಸ್ ತೆಗೆದುಕೊಂಡರೂ? ಇದರಿಂದಲೇ ತಿಳಿಯುತ್ತದೆ. ಸರ್ಕಾರದಿಂದ ಹೆಜ್ಜೆ ಹೆಜ್ಜೆಗೂ ತಪ್ಪು ಮಾಡಿ ಅವರೇ ಸಿಕ್ಕಿ ಬೀಳುತ್ತಿದ್ದಾರೆ. ಮುಡಾದ 14 ನಿವೇಶನಗಳನ್ನು ಹಿಂತಿರುಗಿಸಿರುವುದು ಒಳ್ಳೆಯದೇ ಆದರೆ ಸಮಯ ಸರಿ ಆಗಿಲ್ಲ ಎಂದರು.
ಮಧ್ಯಪ್ರದೇಶ ವಿ/ಎಸ್ ಲಕ್ಷ್ಮೀನಾರಾಯಣ ಎಂಬ 2019ರ ಕೇಸ್ನಲ್ಲಿ ಸುಪ್ರೀಕೋರ್ಟ್ ಸ್ಪಷ್ಟವಾಗಿ ಒಬ್ಬ ಸಾರ್ವಜನಿಕ ಅಧಿಕಾರಿ ಹಾಗು ಮತ್ತೊಬ್ಬರು ಜಂಟಿಯಾಗಬಹುದೇ ಹೊರತು ಕೇಸ್ನಲ್ಲಿ ಆಗಲು ಸಾಧ್ಯವಿಲ್ಲ. ಹೀಗಾಗಿ ಆ ಕೇಸ್ನಂತೆಯೇ ಸಿಎಂ ಸಿದ್ದರಾಮಯ್ಯನವರೇ ನೀವಾಗಿ ನೀವೇ ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರೆ ತಪ್ಪಲಾಗರಾದು ಅದಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಕಳೆದ ಹತ್ತು ವರ್ಷಗಳಿಂದ ಮುಡಾದಲ್ಲಿ ರಿಯಲ್ ಎಸ್ಟೇಟ್ ದಂಧೆ ತಡೆಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಯಾರಿಗೂ ಮುಡಾದಲ್ಲಿ ಸೈಟ್ಗಳು ದೊರೆತ್ತಿಲ್ಲ. 14 ನಿವೇಶನಗಳಲ್ಲದೇ ಇನ್ನುಳಿದ ನಿವೇಶನಗಳ ಬಗ್ಗೆಯೂ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದೇವೆ ಎಂದು ಶಾಸಕ ಶ್ರೀವತ್ಸ ತಿಳಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…