ಮೈಸೂರು ನಗರ

ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಶಾಸಕ ಶ್ರೀವತ್ಸ ಅಸಮಾಧಾನ: ಕಾರಣ ಇಷ್ಟೇ

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್‌ ಶಾಲೆ ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಜಿಲ್ಲಾಧಿಕಾರಿಗಳು ಒತ್ತಡಕ್ಕೆ ಮಣಿದು ಆದೇಶ ಹೊರಡಿಸಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಶ್ರೀವತ್ಸ ಅವರು, ದೊಡ್ಡವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಎನ್ನುವ ಹಾಗೆ ಕಾಣಿಸುತ್ತಿದೆ. ಪೊಲೀಸರು ಇದನ್ನು ಸೂಕ್ಷ್ಮ ಸ್ಥಳವಾಗಿದ್ದು, ಯಥಾ ಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ವರದಿ ನೀಡಿದ್ದಾರೆ. ಆದರೂ ಜಿಲ್ಲಾಧಿಕಾರಿ ಅವರು ಗ್ರಾಮಸ್ಥರ ಅಭಿಪ್ರಾಯಕ್ಕೆ ಮಣಿಯದೇ ಆದೇಶ ಹೊರಡಿಸಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯ ಹೋರಾಟ ಮುಂದುವರಿಯುತ್ತದೆ. ಗ್ರಾಮಸ್ಥರ ಪರವಾಗಿ ನಾವೆಲ್ಲಾ ಇದ್ದೇವೆ. ಕ್ಯಾತಮಾರನಹಳ್ಳಿ ಒಂದು ಸೂಕ್ಷ್ಮ ಪ್ರದೇಶ. ಈ ಜಾಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋಗಿದ್ದಾರೆ. ವಿಚಾರ ಇಷ್ಟೆಲ್ಲಾ ಸೂಕ್ಷ್ಮವಾಗಿದ್ದರೂ ಜಿಲ್ಲಾಧಿಕಾರಿ ಅವರು ಆದೇಶ ನೀಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

2 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

5 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

5 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

5 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

5 hours ago