Mysore
30
clear sky

Social Media

ಶನಿವಾರ, 31 ಜನವರಿ 2026
Light
Dark

ಪ್ರತಾಪ್‌ ಸಿಂಹನ ಮಾತು ಹಾಗೂ ನಾಲಿಗೆ ಸ್ವಲ್ಪ ಸರಿಯಿಲ್ಲ: ತನ್ವೀರ್‌ ಸೇಠ್‌ ಕಿಡಿ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳಬಾರದು ಎಂದು ಶಾಸಕ ತನ್ವೀರ್‌ ಸೇಠ್‌ ಸಲಹೆ ನೀಡಿದ್ದಾರೆ.

ರಾಜ್ಯ ಬಜೆಟ್‌ ಹಲಾಲ್‌ ಬಜೆಟ್‌ ಎಂದು ಬಿಜೆಪಿ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌ ಅವರು, ಈ ಬಾರಿಯ ಬಜೆಟ್‌ನಲ್ಲಿ 1% ಅಷ್ಟೇ ಮುಸ್ಲಿಂಮರಿಗೆ ಸಿಕ್ಕಿದೆ. ಇದನ್ನು ಹಲಾಲ್‌ ಬಜೆಟ್‌ ಅಂದರೆ ಅರ್ಥ ಇದೆಯಾ ಎಂದು ಪ್ರಶ್ನೆ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು ಮೈಸೂರಿನಲ್ಲಿ 2014ರಲ್ಲಿ ನಡೆದಿರುವ ಪ್ರಕರಣ ನನ್ನ ತಲೆಯಲ್ಲಿ ಇಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಸಭ್ಯತೆ ಮೀರಿ ನಡೆದುಕೊಳ್ಳುತ್ತಿದ್ದಾರೆ. ಅದು ಸರಿಯಲ್ಲ. ಪ್ರತಾಪ್‌ ಸಿಂಹ ನನ್ನ ಸ್ನೇಹಿತ, ಆದರೆ ಆತನ ಮಾತು, ನಾಲಿಗೆ ಸ್ವಲ್ಪ ಸರಿಯಲ್ಲ. ಅವನ ಮಾತಿನಿಂದ ಹಲವರಿಗೆ ತೀವ್ರ ನೋವಾಗಿದೆ. ಅದನ್ನು ಕಂಟ್ರೋಲ್‌ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

 

Tags:
error: Content is protected !!