ಮೈಸೂರು: ಶಾಸಕ ಟಿ.ಎಸ್. ಶ್ರೀವತ್ಸ ತಮ್ಮ ಕ್ಷೇತ್ರದ ವಿದ್ಯಾರಣ್ಯಪುರಂ ಭಾಗದಲ್ಲಿ ರೌಂಡ್ಸ್ ಹಾಕಿ ಸ್ಥಳೀಯರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಬೆಳಿಗ್ಗೆ ವಾರ್ಡ್ ನಂ 61ರ ಸುತ್ತಮುತ್ತ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಶಾಸಕ ಟಿಎಸ್ ಶ್ರೀವತ್ಸ, ಸ್ಥಳೀಯರ ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದರು.
ಶಾಸಕರ ಬಳಿ ಸಮಸ್ಯೆ ತೋಡಿಕೊಂಡ ಸ್ಥಳೀಯ ನಿವಾಸಿ ನಿಂಗರಾಜು, ಬೆಳಗಿನ ಸಮಯ ಮಕ್ಕಳು ಕ್ರಿಕೆಟ್ ಆಡುವುದರಿಂದ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿದೆ ಹಾಗೂ ರಾತ್ರಿ ಸಮಯ ಪುಂಡ ಹುಡುಗರು ಮದ್ಯಪಾನ ಮಾಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ಈ ವೇಳೆ ಅಭಿವೃದ್ದಿ ಅಧಿಕಾರಿ ಮಂಜುನಾಥ್ ರೆಡ್ಡಿ, ಇಂಜಿನಿಯರ್ ಚೇತನ್, ಆರೋಗ್ಯಾಧಿಕಾರಿ ಶಿವಪ್ರಸಾದ್, ಶಾಸಕರ ಆಪ್ತ ಸಹಾಯಕ ಆದಿತ್ಯ, ವಾರ್ಡ್ ಉಸ್ತುವಾರಿ ಜೋಗಿ ಮಂಜು, ಮಾಜಿ ನಗರ ಪಾಲಿಕೆ ಸದಸ್ಯ ಜಗದೀಶ್, ವಾರ್ಡ್ ಅಧ್ಯಕ್ಷ ಶಿವಪ್ರಸಾದ್, ಶಿವಲಿಂಗ ಸ್ವಾಮಿ, ಕಿಶೋರ್, ವಾಸು, ಶ್ರೀಧರ್ ಭಟ್ ಮುಂತಾದವರು ಇದ್ದರು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…