ಮೈಸೂರು ನಗರ

ಸ್ವಕ್ಷೇತ್ರ ಸುತ್ತಿ ಸ್ಥಳಿಯರ ಸಮಸ್ಯೆ ಆಲಿಸಿದ ಶಾಸಕ ಟಿ.ಎಸ್‌. ಶ್ರೀವತ್ಸ

ಮೈಸೂರು: ಶಾಸಕ ಟಿ.ಎಸ್‌. ಶ್ರೀವತ್ಸ ತಮ್ಮ ಕ್ಷೇತ್ರದ ವಿದ್ಯಾರಣ್ಯಪುರಂ ಭಾಗದಲ್ಲಿ ರೌಂಡ್ಸ್‌ ಹಾಕಿ ಸ್ಥಳೀಯರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಬೆಳಿಗ್ಗೆ ವಾರ್ಡ್‌ ನಂ 61ರ ಸುತ್ತಮುತ್ತ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಶಾಸಕ ಟಿಎಸ್‌ ಶ್ರೀವತ್ಸ, ಸ್ಥಳೀಯರ ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದರು.

ಶಾಸಕರ ಬಳಿ ಸಮಸ್ಯೆ ತೋಡಿಕೊಂಡ ಸ್ಥಳೀಯ ನಿವಾಸಿ ನಿಂಗರಾಜು, ಬೆಳಗಿನ ಸಮಯ ಮಕ್ಕಳು ಕ್ರಿಕೆಟ್‌ ಆಡುವುದರಿಂದ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿದೆ ಹಾಗೂ ರಾತ್ರಿ ಸಮಯ ಪುಂಡ ಹುಡುಗರು ಮದ್ಯಪಾನ ಮಾಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.

ಈ ವೇಳೆ ಅಭಿವೃದ್ದಿ ಅಧಿಕಾರಿ ಮಂಜುನಾಥ್‌ ರೆಡ್ಡಿ, ಇಂಜಿನಿಯರ್‌ ಚೇತನ್‌, ಆರೋಗ್ಯಾಧಿಕಾರಿ ಶಿವಪ್ರಸಾದ್‌, ಶಾಸಕರ ಆಪ್ತ ಸಹಾಯಕ ಆದಿತ್ಯ, ವಾರ್ಡ್‌ ಉಸ್ತುವಾರಿ ಜೋಗಿ ಮಂಜು, ಮಾಜಿ ನಗರ ಪಾಲಿಕೆ ಸದಸ್ಯ ಜಗದೀಶ್‌, ವಾರ್ಡ್‌ ಅಧ್ಯಕ್ಷ ಶಿವಪ್ರಸಾದ್‌, ಶಿವಲಿಂಗ ಸ್ವಾಮಿ, ಕಿಶೋರ್‌, ವಾಸು, ಶ್ರೀಧರ್‌ ಭಟ್‌ ಮುಂತಾದವರು ಇದ್ದರು.

ಆಂದೋಲನ ಡೆಸ್ಕ್

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

22 mins ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

25 mins ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

32 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

35 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago