ಮೈಸೂರು: ಶಾಸಕ ಟಿ.ಎಸ್. ಶ್ರೀವತ್ಸ ತಮ್ಮ ಕ್ಷೇತ್ರದ ವಿದ್ಯಾರಣ್ಯಪುರಂ ಭಾಗದಲ್ಲಿ ರೌಂಡ್ಸ್ ಹಾಕಿ ಸ್ಥಳೀಯರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಬೆಳಿಗ್ಗೆ ವಾರ್ಡ್ ನಂ 61ರ ಸುತ್ತಮುತ್ತ ಅಧಿಕಾರಿಗಳೊಂದಿಗೆ ಪ್ರದಕ್ಷಿಣೆ ಹಾಕಿದ ಶಾಸಕ ಟಿಎಸ್ ಶ್ರೀವತ್ಸ, ಸ್ಥಳೀಯರ ಹಲವಾರು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡಿದರು.
ಶಾಸಕರ ಬಳಿ ಸಮಸ್ಯೆ ತೋಡಿಕೊಂಡ ಸ್ಥಳೀಯ ನಿವಾಸಿ ನಿಂಗರಾಜು, ಬೆಳಗಿನ ಸಮಯ ಮಕ್ಕಳು ಕ್ರಿಕೆಟ್ ಆಡುವುದರಿಂದ ಅಕ್ಕಪಕ್ಕದ ಮನೆಗಳಿಗೆ ತೊಂದರೆಯಾಗುತ್ತಿದೆ ಹಾಗೂ ರಾತ್ರಿ ಸಮಯ ಪುಂಡ ಹುಡುಗರು ಮದ್ಯಪಾನ ಮಾಡುತ್ತಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ಈ ವೇಳೆ ಅಭಿವೃದ್ದಿ ಅಧಿಕಾರಿ ಮಂಜುನಾಥ್ ರೆಡ್ಡಿ, ಇಂಜಿನಿಯರ್ ಚೇತನ್, ಆರೋಗ್ಯಾಧಿಕಾರಿ ಶಿವಪ್ರಸಾದ್, ಶಾಸಕರ ಆಪ್ತ ಸಹಾಯಕ ಆದಿತ್ಯ, ವಾರ್ಡ್ ಉಸ್ತುವಾರಿ ಜೋಗಿ ಮಂಜು, ಮಾಜಿ ನಗರ ಪಾಲಿಕೆ ಸದಸ್ಯ ಜಗದೀಶ್, ವಾರ್ಡ್ ಅಧ್ಯಕ್ಷ ಶಿವಪ್ರಸಾದ್, ಶಿವಲಿಂಗ ಸ್ವಾಮಿ, ಕಿಶೋರ್, ವಾಸು, ಶ್ರೀಧರ್ ಭಟ್ ಮುಂತಾದವರು ಇದ್ದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…