ಮೈಸೂರು ನಗರ

ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿ

ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್‌ ಫೇಲ್ಯೂರ್‌ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ ಅಭಿಮಾನಿಗಳನ್ನು ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಆಗಿರುವ ಪ್ರಮಾದವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇದಕ್ಕಾಗಿ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶ ಮಾಡಿದ್ದೇವೆ. ಇದರಲ್ಲಿ ಸಿಎಂ ಹಾಗೂ ಡಿಸಿಎಂ ಪಾತ್ರವಿಲ್ಲ. ಆರ್‌ಸಿಬಿ ಮ್ಯಾನೇಜ್ಮೆಂಟ್ ಸಂಭ್ರಮಾಚರಣೆ ಮಾಡಿ ಎಂದು ಮನವಿ ಮಾಡಿದ್ದ ಕಾರಣಕ್ಕಾಗಿ ನಾವು ಒಪ್ಪಿಕೊಂಡಿದ್ದೆವು. ಎರಡು ಕಡೆ ಏಕಕಾಲಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದರು. ಎಲ್ಲಾ ಜವಾಬ್ದಾರಿಗಳನ್ನು ಪೊಲೀಸರಿಗೆ ಕೊಡಲಾಗಿತ್ತು. ಆದರೂ ಈ ಘಟನೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಸರ್ಕಾರದ ಬೇಜಾವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆ ಆಯಿತು: ಮಾಜಿ ಸಂಸದ ಪ್ರತಾಪ್‌ ಸಿಂಹ

ಇನ್ನು ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ. ವಿರೋಧ ಪಕ್ಷವಾಗಿ ನಮ್ಮನ್ನು ತಿದ್ದುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಇಂತಹ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಿಲ್ಲ. ವಿಧಾನಸೌಧದಲ್ಲಿ ರಾಜಕಾರಣಿಗಳ ಕುಟುಂಬಕ್ಕಾಗಿ ಕಾರ್ಯಕ್ರಮ ಮಾಡಿದ್ದಾರೆ ಎಂಬುದು ಸರಿಯಲ್ಲ. ಹೆಚ್ಚು ಜನ ಸೇರೋದು ಸ್ಟೇಡಿಯಂನಲ್ಲಿ. ಅಲ್ಲಿ ಈ ಘಟನೆ ಆಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

26 seconds ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

21 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

30 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

2 hours ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

3 hours ago