mlc da yatheendra
ಮೈಸೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಇಂಟಿಲಿಜೆನ್ಸ್ ಫೇಲ್ಯೂರ್ ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಿನ್ನೆಯ ಕಾರ್ಯಕ್ರಮಕ್ಕೆ ನಿರೀಕ್ಷೆಗಿಂತ ಹೆಚ್ಚಿನ ಜನ ಬಂದಿದ್ದಾರೆ. ಹಾಗಾಗಿ ಅಭಿಮಾನಿಗಳನ್ನು ನಿಯಂತ್ರಣ ಮಾಡಲು ಸಾಧ್ಯವಾಗಲಿಲ್ಲ. ಆಗಿರುವ ಪ್ರಮಾದವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇದಕ್ಕಾಗಿ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ಮಾಡಿದ್ದೇವೆ. ಇದರಲ್ಲಿ ಸಿಎಂ ಹಾಗೂ ಡಿಸಿಎಂ ಪಾತ್ರವಿಲ್ಲ. ಆರ್ಸಿಬಿ ಮ್ಯಾನೇಜ್ಮೆಂಟ್ ಸಂಭ್ರಮಾಚರಣೆ ಮಾಡಿ ಎಂದು ಮನವಿ ಮಾಡಿದ್ದ ಕಾರಣಕ್ಕಾಗಿ ನಾವು ಒಪ್ಪಿಕೊಂಡಿದ್ದೆವು. ಎರಡು ಕಡೆ ಏಕಕಾಲಕ್ಕೆ ನಿರೀಕ್ಷೆಗೂ ಮೀರಿ ಜನ ಬಂದಿದ್ದರು. ಎಲ್ಲಾ ಜವಾಬ್ದಾರಿಗಳನ್ನು ಪೊಲೀಸರಿಗೆ ಕೊಡಲಾಗಿತ್ತು. ಆದರೂ ಈ ಘಟನೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:- ಸರ್ಕಾರದ ಬೇಜಾವಾಬ್ದಾರಿತನದಿಂದ ಸಂಭ್ರಮಾಚರಣೆ ಶೋಕಾಚರಣೆ ಆಯಿತು: ಮಾಜಿ ಸಂಸದ ಪ್ರತಾಪ್ ಸಿಂಹ
ಇನ್ನು ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ. ವಿರೋಧ ಪಕ್ಷವಾಗಿ ನಮ್ಮನ್ನು ತಿದ್ದುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಇಂತಹ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಿಲ್ಲ. ವಿಧಾನಸೌಧದಲ್ಲಿ ರಾಜಕಾರಣಿಗಳ ಕುಟುಂಬಕ್ಕಾಗಿ ಕಾರ್ಯಕ್ರಮ ಮಾಡಿದ್ದಾರೆ ಎಂಬುದು ಸರಿಯಲ್ಲ. ಹೆಚ್ಚು ಜನ ಸೇರೋದು ಸ್ಟೇಡಿಯಂನಲ್ಲಿ. ಅಲ್ಲಿ ಈ ಘಟನೆ ಆಗಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…