ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್ ಲೇಸ್ ಪರ್ಸನ್. ಬೇಜವಾಬ್ದಾರಿ ಮನುಷ್ಯ, ಈ ಬೇಜವಾಬ್ದಾರಿಯಿಂದಲೇ ಇಷ್ಟೊಂದು ತೊಂದರೆ ತಂದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ನಲ್ಲಿ ಸಿದ್ದರಾಮಯ್ಯ ಇದ್ದಾಗ ಕಾಂಗ್ರೆಸ್ ಬಗ್ಗೆ ಕಟುವಾಗಿ ಟೀಕಿಸುತ್ತಿದ್ದರು. ಬಳಿಕ ಜೆಡಿಎಸ್ನಿಂದ ಅವರನ್ನು ಹೊರ ಹಾಕಿದಾಗ ಬೀದಿಪಾಲಾಗಿದ್ದರು. ಆಗ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ಕರೆದು ತಂದದ್ದು ನಾವು. ಆದರೆ, ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಮಾತು ಎತ್ತಿದರೆ ನಾನು ಅಕ್ಕಿ ಕೊಟ್ಟೆ ಎನ್ನುತ್ತಾರೆ. ಆದರೆ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಕ್ಕಿ ಬೆಳೆಯುವ ಭೂಮಿಯನ್ನೇ ನೀಡಿದ್ದಾರೆ. ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಆಡಳಿತವನ್ನು ಈಗ ನೀಡಲು ಸಾಧ್ಯವಾಗುತ್ತಿಲ್ಲ. ಜೊತೆಗೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಒಂದೂವರೆ ಕೋಟಿ ರೂ. ಬೆಲೆ ಬಾಳುವ ನಿವೇಶನಗಳನ್ನು ಕೇವಲ ಒಂದು ಸಾವಿರ ಅಥವಾ ಎರಡು ಸಾವಿರಕ್ಕೆ ನೀಡಿದ್ದಾರೆ. ಅದರಲ್ಲಿ ಸಿಎಂ ಪತ್ನಿಗೂ ಈ ರೀತಿಯಲ್ಲಿಯೇ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಬಳಿಕ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಇತ್ತೀಚೆಗೆ ಜನತೆ ಲೋಕಾಯುಕ್ತ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳಿಗೆ ಅಧಿಕೃತವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…