ಮೈಸೂರು: ಸಿಎಂ ಸಿದ್ದರಾಮಯ್ಯ ಒಬ್ಬ ಕೇರ್ ಲೇಸ್ ಪರ್ಸನ್. ಬೇಜವಾಬ್ದಾರಿ ಮನುಷ್ಯ, ಈ ಬೇಜವಾಬ್ದಾರಿಯಿಂದಲೇ ಇಷ್ಟೊಂದು ತೊಂದರೆ ತಂದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ನಲ್ಲಿ ಸಿದ್ದರಾಮಯ್ಯ ಇದ್ದಾಗ ಕಾಂಗ್ರೆಸ್ ಬಗ್ಗೆ ಕಟುವಾಗಿ ಟೀಕಿಸುತ್ತಿದ್ದರು. ಬಳಿಕ ಜೆಡಿಎಸ್ನಿಂದ ಅವರನ್ನು ಹೊರ ಹಾಕಿದಾಗ ಬೀದಿಪಾಲಾಗಿದ್ದರು. ಆಗ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ಗೆ ಕರೆದು ತಂದದ್ದು ನಾವು. ಆದರೆ, ಸಿದ್ದರಾಮಯ್ಯ ಅದೇ ಪಕ್ಷದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು ವಿಪರ್ಯಾಸದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಮಾತು ಎತ್ತಿದರೆ ನಾನು ಅಕ್ಕಿ ಕೊಟ್ಟೆ ಎನ್ನುತ್ತಾರೆ. ಆದರೆ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ಅಕ್ಕಿ ಬೆಳೆಯುವ ಭೂಮಿಯನ್ನೇ ನೀಡಿದ್ದಾರೆ. ಸಿದ್ದರಾಮಯ್ಯ ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಆಡಳಿತವನ್ನು ಈಗ ನೀಡಲು ಸಾಧ್ಯವಾಗುತ್ತಿಲ್ಲ. ಜೊತೆಗೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಒಂದೂವರೆ ಕೋಟಿ ರೂ. ಬೆಲೆ ಬಾಳುವ ನಿವೇಶನಗಳನ್ನು ಕೇವಲ ಒಂದು ಸಾವಿರ ಅಥವಾ ಎರಡು ಸಾವಿರಕ್ಕೆ ನೀಡಿದ್ದಾರೆ. ಅದರಲ್ಲಿ ಸಿಎಂ ಪತ್ನಿಗೂ ಈ ರೀತಿಯಲ್ಲಿಯೇ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಬಳಿಕ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಇತ್ತೀಚೆಗೆ ಜನತೆ ಲೋಕಾಯುಕ್ತ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳಿಗೆ ಅಧಿಕೃತವಾಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…