ಮೈಸೂರು: ವಿಜಯನಗರ ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಬ್ಬ ಐಎಎಸ್ ಅಧಿಕಾರಿಗೆ ಏಕವಚನದಲ್ಲಿ ಬೈದು ಅಲ್ಲಿಂದ ಎದ್ದು ಹೋಗು ಎಂದು ಹೇಳಿರುವುದು ಖಂಡನೀಯ. ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲಿ ಮಾತನಾಡುವುದು ಅಭ್ಯಾಸ ಮಾಡಿಕೊಂಡಿದ್ದಾರೆ. ಅದಕ್ಕೆ ಅವರ ಪಟಾಲಂಗಳು ಕೇಕೆ ಹಾಕುತ್ತಾರೆ. ದುರಹಂಕಾರದ ನಡೆ ಸರಿಯಲ್ಲ. ಉತ್ತಮ ಆಡಳಿತ ಕೊಟ್ಟು ದುರಹಂಕಾರ ತೋರಿಸಿ. ಇನ್ನು ಮುಂದಾದರೂ ದುರಹಂಕಾರದಿಂದ ನಡೆದುಕೊಳ್ಳೋದನ್ನು ಬಿಡಿ ಎಂದು ಕಿಡಿಕಾರಿದರು.
ಇನ್ನು ಬೆಂಗಳೂರಿನಲ್ಲಿ ಗೋವುಗಳ ಕೆಚ್ಚಲು ಕೋಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಪೂಜೆ ಮಾಡುವ ದೇವರು ಗೋವು. ಅದರ ಕೆಚ್ಚಲು ಕೂಯ್ದಿರುವುದು ಬಹಳ ಖಂಡನೆ. ಸಿದ್ದರಾಮಯ್ಯನವರೇ ನೀವು ಯಾವ ಆಡಳಿತ ಕೊಡ್ತಾ ಇದ್ದೀರಿ.? ಮೈಸೂರು ಮುಡಾ ಪ್ರಕರಣದಲ್ಲಿ ಲೂಟಿ ಮಾಡಿದ್ದ ಆ ಇಬ್ಬರು ಆಯುಕ್ತರನ್ನ ನೀವು ಮುಟ್ಟಲಿಕ್ಕೆ ಆಗಲಿಲ್ಲ. ಅವರ ವಿರುದ್ಧ ಏನು ಕ್ರಮ ತಗೆದುಕೊಂಡ್ರಿ.? ಸಿದ್ದರಾಮಯ್ಯ ಅವರ ಕಾಲದಲ್ಲಿ 1 ಸಾವಿರಕ್ಕೆ ಒಂದು ಸೈಟು. ನಿಮ್ಮ ಯೋಗ್ಯತೆಗೆ ಬೆಂಕಿಹಾಕ, ನಿಮ್ಮ ಆಡಳಿತಕ್ಕೆ ಒಂದಷ್ಟು ಬೆಂಕಿ ಹಾಕ. ಎರಡು ವರ್ಷಗಳು ಕಳಿತಾ ಬರ್ತಿದೆ ರಾಜ್ಯಕ್ಕೆ ಸಿಎಂ ಆಗಿ ಏನ್ ಮಾಡಿದ್ರಿ ಎಂದು ವಾಗ್ದಾಳಿ ನಡೆಸಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…