ಮೈಸೂರು: ವಿಜಯನಗರ ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಬ್ಬ ಐಎಎಸ್ ಅಧಿಕಾರಿಗೆ ಏಕವಚನದಲ್ಲಿ ಬೈದು ಅಲ್ಲಿಂದ ಎದ್ದು ಹೋಗು ಎಂದು ಹೇಳಿರುವುದು ಖಂಡನೀಯ. ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲಿ ಮಾತನಾಡುವುದು ಅಭ್ಯಾಸ ಮಾಡಿಕೊಂಡಿದ್ದಾರೆ. ಅದಕ್ಕೆ ಅವರ ಪಟಾಲಂಗಳು ಕೇಕೆ ಹಾಕುತ್ತಾರೆ. ದುರಹಂಕಾರದ ನಡೆ ಸರಿಯಲ್ಲ. ಉತ್ತಮ ಆಡಳಿತ ಕೊಟ್ಟು ದುರಹಂಕಾರ ತೋರಿಸಿ. ಇನ್ನು ಮುಂದಾದರೂ ದುರಹಂಕಾರದಿಂದ ನಡೆದುಕೊಳ್ಳೋದನ್ನು ಬಿಡಿ ಎಂದು ಕಿಡಿಕಾರಿದರು.
ಇನ್ನು ಬೆಂಗಳೂರಿನಲ್ಲಿ ಗೋವುಗಳ ಕೆಚ್ಚಲು ಕೋಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಪೂಜೆ ಮಾಡುವ ದೇವರು ಗೋವು. ಅದರ ಕೆಚ್ಚಲು ಕೂಯ್ದಿರುವುದು ಬಹಳ ಖಂಡನೆ. ಸಿದ್ದರಾಮಯ್ಯನವರೇ ನೀವು ಯಾವ ಆಡಳಿತ ಕೊಡ್ತಾ ಇದ್ದೀರಿ.? ಮೈಸೂರು ಮುಡಾ ಪ್ರಕರಣದಲ್ಲಿ ಲೂಟಿ ಮಾಡಿದ್ದ ಆ ಇಬ್ಬರು ಆಯುಕ್ತರನ್ನ ನೀವು ಮುಟ್ಟಲಿಕ್ಕೆ ಆಗಲಿಲ್ಲ. ಅವರ ವಿರುದ್ಧ ಏನು ಕ್ರಮ ತಗೆದುಕೊಂಡ್ರಿ.? ಸಿದ್ದರಾಮಯ್ಯ ಅವರ ಕಾಲದಲ್ಲಿ 1 ಸಾವಿರಕ್ಕೆ ಒಂದು ಸೈಟು. ನಿಮ್ಮ ಯೋಗ್ಯತೆಗೆ ಬೆಂಕಿಹಾಕ, ನಿಮ್ಮ ಆಡಳಿತಕ್ಕೆ ಒಂದಷ್ಟು ಬೆಂಕಿ ಹಾಕ. ಎರಡು ವರ್ಷಗಳು ಕಳಿತಾ ಬರ್ತಿದೆ ರಾಜ್ಯಕ್ಕೆ ಸಿಎಂ ಆಗಿ ಏನ್ ಮಾಡಿದ್ರಿ ಎಂದು ವಾಗ್ದಾಳಿ ನಡೆಸಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…