ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‌ಸಿ ಎಚ್. ವಿಶ್ವನಾಥ್ ಏಕವಚನದಲ್ಲೇ ವಾಗ್ದಾಳಿ

ಮೈಸೂರು: ವಿಜಯನಗರ ಜಿಲ್ಲಾಧಿಕಾರಿಗೆ ಸಿಎಂ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಬ್ಬ ಐಎಎಸ್ ಅಧಿಕಾರಿಗೆ ಏಕವಚನದಲ್ಲಿ ಬೈದು ಅಲ್ಲಿಂದ ಎದ್ದು ಹೋಗು ಎಂದು ಹೇಳಿರುವುದು ಖಂಡನೀಯ. ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲಿ ಮಾತನಾಡುವುದು ಅಭ್ಯಾಸ ಮಾಡಿಕೊಂಡಿದ್ದಾರೆ. ಅದಕ್ಕೆ ಅವರ ಪಟಾಲಂಗಳು ಕೇಕೆ ಹಾಕುತ್ತಾರೆ. ದುರಹಂಕಾರದ ನಡೆ ಸರಿಯಲ್ಲ. ಉತ್ತಮ ಆಡಳಿತ ಕೊಟ್ಟು ದುರಹಂಕಾರ ತೋರಿಸಿ. ಇನ್ನು ಮುಂದಾದರೂ ದುರಹಂಕಾರದಿಂದ ನಡೆದುಕೊಳ್ಳೋದನ್ನು ಬಿಡಿ ಎಂದು ಕಿಡಿಕಾರಿದರು.

ಇನ್ನು ಬೆಂಗಳೂರಿನಲ್ಲಿ ಗೋವುಗಳ ಕೆಚ್ಚಲು ಕೋಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಪೂಜೆ ಮಾಡುವ ದೇವರು ಗೋವು. ಅದರ ಕೆಚ್ಚಲು ಕೂಯ್ದಿರುವುದು ಬಹಳ ಖಂಡನೆ. ಸಿದ್ದರಾಮಯ್ಯನವರೇ ನೀವು ಯಾವ ಆಡಳಿತ ಕೊಡ್ತಾ ಇದ್ದೀರಿ.? ಮೈಸೂರು ಮುಡಾ ಪ್ರಕರಣದಲ್ಲಿ ಲೂಟಿ ಮಾಡಿದ್ದ ಆ ಇಬ್ಬರು ಆಯುಕ್ತರನ್ನ ನೀವು ಮುಟ್ಟಲಿಕ್ಕೆ ಆಗಲಿಲ್ಲ. ಅವರ ವಿರುದ್ಧ ಏನು ಕ್ರಮ ತಗೆದುಕೊಂಡ್ರಿ.? ಸಿದ್ದರಾಮಯ್ಯ ಅವರ ಕಾಲದಲ್ಲಿ 1 ಸಾವಿರಕ್ಕೆ ಒಂದು ಸೈಟು. ನಿಮ್ಮ ಯೋಗ್ಯತೆಗೆ ಬೆಂಕಿಹಾಕ, ನಿಮ್ಮ ಆಡಳಿತಕ್ಕೆ ಒಂದಷ್ಟು ಬೆಂಕಿ ಹಾಕ. ಎರಡು ವರ್ಷಗಳು ಕಳಿತಾ ಬರ್ತಿದೆ ರಾಜ್ಯಕ್ಕೆ ಸಿಎಂ ಆಗಿ ಏನ್ ಮಾಡಿದ್ರಿ ಎಂದು ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

8 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

22 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

23 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

25 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

27 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

32 mins ago