ಮೈಸೂರು ನಗರ

ಭೈರಪ್ಪ ನಿಧನಕ್ಕೆ ಎಂಎಲ್‌ಸಿ ಶಿವಕುಮಾರ್‌ ಕಂಬನಿ

ಮೈಸೂರು : ನಾಡಿನ ಶ್ರೇಷ್ಠ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.

ಕನ್ನಡದ ಬಗ್ಗೆ ಭೈರಪ್ಪ ಅವರದು ಅಗಾಧವಾದ ಪ್ರೀತಿ ಹಾಗೂ ಬದ್ಧತೆ. ಸೈದ್ಧಾಂತಿಕವಾಗಿ ಅವರ ನಿಲುವುಗಳನ್ನು ವಿರೋಧಿಸಬಹುದಿತ್ತು. ಆದರೆ, ಅವರ ಅನುಭವದ ಗಟ್ಟಿ ಬರವಣಿಗೆ, ಅನುಭವಿಸಿ ಬರೆಯುವ ವಿಧಾನ, ಪಾಂಡಿತ್ಯ, ಪ್ರಾಮಾಣಿಕ ವ್ಯಕ್ತಿತ್ವಕ್ಕೆ ಯಾರಾದರೂ ತಲೆಬಾಗಲೇಬೇಕಿತ್ತು. ಭೈರಪ್ಪ ಅವರಿಗೆ ಅಪಾರ ಓದುಗ ಅಭಿಮಾನಿ ಬಳಗವಿತ್ತು. ಅವರು ಯಾವುದೇ ಕೃತಿ ರಚಿಸಿದರೂ ಮೊದಲು ಅಧ್ಯಯನ, ಸಂಶೋಧನೆ ಮಾಡುತ್ತಿದ್ದರು. ಕ್ಷೇತ್ರ ಕಾರ್ಯ ಮಾಡುತ್ತಿದ್ದರು. ನಂತರ ಬರವಣಿಗೆಯಾಗಿತ್ತು. ಅವರೊಬ್ಬರು ಸ್ಟಾರ್ ಕಾದಂಬರಿಕಾರರಾಗಿದ್ದರು. ದೇಶ-ವಿದೇಶಗಳ ಅನೇಕ ಭಾಷೆಗಳಿಗೆ ಅವರ ಕಾದಂಬರಿಗಳು ತರ್ಜುಮೆಗೊಂಡಿರುವುದು ದಾಖಲೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ:-ಚಾಮುಂಡಿ ಗುಡಿಯಲ್ಲಿಲ್ಲ, ಹೋರಾಡುವ ಮಹಿಳೆಯರಲ್ಲಿದ್ದಾಳೆ : ನಾಗಲಕ್ಷ್ಮಿ ಬಣ್ಣನೆ

ಭೈರಪ್ಪನವರದು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ. ಇಡೀ ಕರ್ನಾಟಕದ ಜನಮಾನಸವನ್ನು ಆವರಿಸಿದ ವ್ಯಕ್ತಿ ಅವರಾಗಿದ್ದರು. ಕಡುಬಡತನದಲ್ಲಿ ಬೆಳೆದ ಅವರು ತಾವು ಸಂಪಾದಿಸಿದ ಹಣದಲ್ಲಿ ಸ್ವಲ್ಪ ಭಾಗವನ್ನು ಬಡಜನರ ಕಲ್ಯಾಣಕ್ಕಾಗಿ ದಾನ ಮಾಡುತ್ತಿದ್ದರು. ತಮಗೆ ಬಂದ ಪ್ರಶಸ್ತಿಗಳ ಮೊತ್ತವನ್ನೂ ಸದ್ವಿನಿಯೋಗ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಟ್ರಸ್ಟ್ ಸ್ಥಾಪಿಸಿ ತಮ್ಮ ಪುಸ್ತಕಗಳ ರಾಯಲ್ಟಿಯ ಹಣವನ್ನು ಅದಕ್ಕೆ ಕೊಟ್ಟಿದ್ದರು ಎಂದು ಶಿವಕುಮಾರ್ ನೆನಪಿಸಿಕೊಂಡಿದ್ದಾರೆ.

ಪತ್ರಕರ್ತನಾಗಿ ಅನೇಕ ಬಾರಿ ಭೈರಪ್ಪ ಅವರನ್ನು ಭೇಟಿ ಮಾಡಿ ಮಾತಾಡಿಸಿದ್ದೇನೆ. ಅವರ ಸಭೆ, ಸಮಾರಂಭಗಳನ್ನು ವರದಿ ಮಾಡಿದ್ದೇನೆ. ಅವರ ವಿಚಾರಗಳಲ್ಲಿ ಬಹಳ ಸ್ಪಷ್ಟತೆ ಇತ್ತು. ನಿಲುವು ಧೃಡವಾಗಿತ್ತು. ವಿವಾದಗಳಿಗೆ ಅವರು ಹೆದರುತ್ತಿರಲಿಲ್ಲ. ತಮ್ಮ ಅಭಿಪ್ರಾಯಗಳನ್ನು ಮುಂದಿಡಲು ಹಿಂಜರಿಯುತ್ತಿರಲಿಲ್ಲ ಎಂದು ಶಿವಕುಮಾರ್ ಮೆಲುಕು ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 mins ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

34 mins ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

1 hour ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

1 hour ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

2 hours ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

2 hours ago