ಮೈಸೂರು : ನಾಡಿನ ಶ್ರೇಷ್ಠ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.
ಕನ್ನಡದ ಬಗ್ಗೆ ಭೈರಪ್ಪ ಅವರದು ಅಗಾಧವಾದ ಪ್ರೀತಿ ಹಾಗೂ ಬದ್ಧತೆ. ಸೈದ್ಧಾಂತಿಕವಾಗಿ ಅವರ ನಿಲುವುಗಳನ್ನು ವಿರೋಧಿಸಬಹುದಿತ್ತು. ಆದರೆ, ಅವರ ಅನುಭವದ ಗಟ್ಟಿ ಬರವಣಿಗೆ, ಅನುಭವಿಸಿ ಬರೆಯುವ ವಿಧಾನ, ಪಾಂಡಿತ್ಯ, ಪ್ರಾಮಾಣಿಕ ವ್ಯಕ್ತಿತ್ವಕ್ಕೆ ಯಾರಾದರೂ ತಲೆಬಾಗಲೇಬೇಕಿತ್ತು. ಭೈರಪ್ಪ ಅವರಿಗೆ ಅಪಾರ ಓದುಗ ಅಭಿಮಾನಿ ಬಳಗವಿತ್ತು. ಅವರು ಯಾವುದೇ ಕೃತಿ ರಚಿಸಿದರೂ ಮೊದಲು ಅಧ್ಯಯನ, ಸಂಶೋಧನೆ ಮಾಡುತ್ತಿದ್ದರು. ಕ್ಷೇತ್ರ ಕಾರ್ಯ ಮಾಡುತ್ತಿದ್ದರು. ನಂತರ ಬರವಣಿಗೆಯಾಗಿತ್ತು. ಅವರೊಬ್ಬರು ಸ್ಟಾರ್ ಕಾದಂಬರಿಕಾರರಾಗಿದ್ದರು. ದೇಶ-ವಿದೇಶಗಳ ಅನೇಕ ಭಾಷೆಗಳಿಗೆ ಅವರ ಕಾದಂಬರಿಗಳು ತರ್ಜುಮೆಗೊಂಡಿರುವುದು ದಾಖಲೆಯಾಗಿದೆ ಎಂದಿದ್ದಾರೆ.
ಇದನ್ನೂ ಓದಿ:-ಚಾಮುಂಡಿ ಗುಡಿಯಲ್ಲಿಲ್ಲ, ಹೋರಾಡುವ ಮಹಿಳೆಯರಲ್ಲಿದ್ದಾಳೆ : ನಾಗಲಕ್ಷ್ಮಿ ಬಣ್ಣನೆ
ಭೈರಪ್ಪನವರದು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ. ಇಡೀ ಕರ್ನಾಟಕದ ಜನಮಾನಸವನ್ನು ಆವರಿಸಿದ ವ್ಯಕ್ತಿ ಅವರಾಗಿದ್ದರು. ಕಡುಬಡತನದಲ್ಲಿ ಬೆಳೆದ ಅವರು ತಾವು ಸಂಪಾದಿಸಿದ ಹಣದಲ್ಲಿ ಸ್ವಲ್ಪ ಭಾಗವನ್ನು ಬಡಜನರ ಕಲ್ಯಾಣಕ್ಕಾಗಿ ದಾನ ಮಾಡುತ್ತಿದ್ದರು. ತಮಗೆ ಬಂದ ಪ್ರಶಸ್ತಿಗಳ ಮೊತ್ತವನ್ನೂ ಸದ್ವಿನಿಯೋಗ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಟ್ರಸ್ಟ್ ಸ್ಥಾಪಿಸಿ ತಮ್ಮ ಪುಸ್ತಕಗಳ ರಾಯಲ್ಟಿಯ ಹಣವನ್ನು ಅದಕ್ಕೆ ಕೊಟ್ಟಿದ್ದರು ಎಂದು ಶಿವಕುಮಾರ್ ನೆನಪಿಸಿಕೊಂಡಿದ್ದಾರೆ.
ಪತ್ರಕರ್ತನಾಗಿ ಅನೇಕ ಬಾರಿ ಭೈರಪ್ಪ ಅವರನ್ನು ಭೇಟಿ ಮಾಡಿ ಮಾತಾಡಿಸಿದ್ದೇನೆ. ಅವರ ಸಭೆ, ಸಮಾರಂಭಗಳನ್ನು ವರದಿ ಮಾಡಿದ್ದೇನೆ. ಅವರ ವಿಚಾರಗಳಲ್ಲಿ ಬಹಳ ಸ್ಪಷ್ಟತೆ ಇತ್ತು. ನಿಲುವು ಧೃಡವಾಗಿತ್ತು. ವಿವಾದಗಳಿಗೆ ಅವರು ಹೆದರುತ್ತಿರಲಿಲ್ಲ. ತಮ್ಮ ಅಭಿಪ್ರಾಯಗಳನ್ನು ಮುಂದಿಡಲು ಹಿಂಜರಿಯುತ್ತಿರಲಿಲ್ಲ ಎಂದು ಶಿವಕುಮಾರ್ ಮೆಲುಕು ಹಾಕಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…