ಮೈಸೂರು ನಗರ

ಭೈರಪ್ಪ ನಿಧನಕ್ಕೆ ಎಂಎಲ್‌ಸಿ ಶಿವಕುಮಾರ್‌ ಕಂಬನಿ

ಮೈಸೂರು : ನಾಡಿನ ಶ್ರೇಷ್ಠ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.

ಕನ್ನಡದ ಬಗ್ಗೆ ಭೈರಪ್ಪ ಅವರದು ಅಗಾಧವಾದ ಪ್ರೀತಿ ಹಾಗೂ ಬದ್ಧತೆ. ಸೈದ್ಧಾಂತಿಕವಾಗಿ ಅವರ ನಿಲುವುಗಳನ್ನು ವಿರೋಧಿಸಬಹುದಿತ್ತು. ಆದರೆ, ಅವರ ಅನುಭವದ ಗಟ್ಟಿ ಬರವಣಿಗೆ, ಅನುಭವಿಸಿ ಬರೆಯುವ ವಿಧಾನ, ಪಾಂಡಿತ್ಯ, ಪ್ರಾಮಾಣಿಕ ವ್ಯಕ್ತಿತ್ವಕ್ಕೆ ಯಾರಾದರೂ ತಲೆಬಾಗಲೇಬೇಕಿತ್ತು. ಭೈರಪ್ಪ ಅವರಿಗೆ ಅಪಾರ ಓದುಗ ಅಭಿಮಾನಿ ಬಳಗವಿತ್ತು. ಅವರು ಯಾವುದೇ ಕೃತಿ ರಚಿಸಿದರೂ ಮೊದಲು ಅಧ್ಯಯನ, ಸಂಶೋಧನೆ ಮಾಡುತ್ತಿದ್ದರು. ಕ್ಷೇತ್ರ ಕಾರ್ಯ ಮಾಡುತ್ತಿದ್ದರು. ನಂತರ ಬರವಣಿಗೆಯಾಗಿತ್ತು. ಅವರೊಬ್ಬರು ಸ್ಟಾರ್ ಕಾದಂಬರಿಕಾರರಾಗಿದ್ದರು. ದೇಶ-ವಿದೇಶಗಳ ಅನೇಕ ಭಾಷೆಗಳಿಗೆ ಅವರ ಕಾದಂಬರಿಗಳು ತರ್ಜುಮೆಗೊಂಡಿರುವುದು ದಾಖಲೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ:-ಚಾಮುಂಡಿ ಗುಡಿಯಲ್ಲಿಲ್ಲ, ಹೋರಾಡುವ ಮಹಿಳೆಯರಲ್ಲಿದ್ದಾಳೆ : ನಾಗಲಕ್ಷ್ಮಿ ಬಣ್ಣನೆ

ಭೈರಪ್ಪನವರದು ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವ. ಇಡೀ ಕರ್ನಾಟಕದ ಜನಮಾನಸವನ್ನು ಆವರಿಸಿದ ವ್ಯಕ್ತಿ ಅವರಾಗಿದ್ದರು. ಕಡುಬಡತನದಲ್ಲಿ ಬೆಳೆದ ಅವರು ತಾವು ಸಂಪಾದಿಸಿದ ಹಣದಲ್ಲಿ ಸ್ವಲ್ಪ ಭಾಗವನ್ನು ಬಡಜನರ ಕಲ್ಯಾಣಕ್ಕಾಗಿ ದಾನ ಮಾಡುತ್ತಿದ್ದರು. ತಮಗೆ ಬಂದ ಪ್ರಶಸ್ತಿಗಳ ಮೊತ್ತವನ್ನೂ ಸದ್ವಿನಿಯೋಗ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಟ್ರಸ್ಟ್ ಸ್ಥಾಪಿಸಿ ತಮ್ಮ ಪುಸ್ತಕಗಳ ರಾಯಲ್ಟಿಯ ಹಣವನ್ನು ಅದಕ್ಕೆ ಕೊಟ್ಟಿದ್ದರು ಎಂದು ಶಿವಕುಮಾರ್ ನೆನಪಿಸಿಕೊಂಡಿದ್ದಾರೆ.

ಪತ್ರಕರ್ತನಾಗಿ ಅನೇಕ ಬಾರಿ ಭೈರಪ್ಪ ಅವರನ್ನು ಭೇಟಿ ಮಾಡಿ ಮಾತಾಡಿಸಿದ್ದೇನೆ. ಅವರ ಸಭೆ, ಸಮಾರಂಭಗಳನ್ನು ವರದಿ ಮಾಡಿದ್ದೇನೆ. ಅವರ ವಿಚಾರಗಳಲ್ಲಿ ಬಹಳ ಸ್ಪಷ್ಟತೆ ಇತ್ತು. ನಿಲುವು ಧೃಡವಾಗಿತ್ತು. ವಿವಾದಗಳಿಗೆ ಅವರು ಹೆದರುತ್ತಿರಲಿಲ್ಲ. ತಮ್ಮ ಅಭಿಪ್ರಾಯಗಳನ್ನು ಮುಂದಿಡಲು ಹಿಂಜರಿಯುತ್ತಿರಲಿಲ್ಲ ಎಂದು ಶಿವಕುಮಾರ್ ಮೆಲುಕು ಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

5 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

6 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

8 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

8 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

12 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

13 hours ago