ಮೈಸೂರು ನಗರ

ಕರ್ನಾಟಕದ ರಾಜಕೀಯದಲ್ಲೀಗ ನೆಪೋಟಿಸಂ: ಎಂಎಲ್‌ಸಿ ವಿಶ್ವನಾಥ್‌ ಗಂಭೀರ ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು, ರಾಜಕೀಯ ಗಣ್ಯ ನಾಯಕರು ತಮ್ಮ ತಮ್ಮ ಮಕ್ಕಳನ್ನು ಮುಂದೆ ತರಬೇಕು ಎಂದು ಪಣತೊಟ್ಟಿದ್ದಾರೆ. ಇದರಲ್ಲಿ ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಇದ್ದಾರೆ. ಈ ನಾಯಕರಿಗೆ ರಾಜ್ಯದ ಹಿತಾಸಕ್ತಿಗಿಂತ ಅವರ ಕೌಟುಂಬಿಕ ಹಿತಾಸಕ್ತಿಯೇ ಮುಖ್ಯ ಎಂದು ವ್ಯಂಗ್ಯವಾಡಿದರು.

ಇವೆರೆಲ್ಲಾ ಜನರ ಕಷ್ಟಗಳಿಗೆ ಸ್ಪಂದಿಸದೇ, ಜನರ ಏಳಿಗೆಗಾಗಿ ಕೆಲಸ ಮಾಡದೇ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಈಗ ನಡೆಯುತ್ತಿರುವ ಎರಡು ಯಾತ್ರೆಗಳಿಂದ ಜನರಿಗೆ ಏನು ಅನುಕೂಲವಿಲ್ಲ.  ಆ ಯಾತ್ರೆ ಮಾಡುವುದನ್ನು ಬಿಟ್ಟು ಹಳ್ಳಿ ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದರೆ, ಎಷ್ಟೆಲ್ಲಾ ಪ್ರಯೋಜನವಾಗುತ್ತಿತ್ತು ಎಂದು ಪ್ರಶ್ನೆ ಮಾಡಿದರು.

ಇನ್ನೂ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ನವರು ಮೂರು ಬಿಟ್ಟವರಂತೆ ವರ್ತಿಸುತ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಅವರು ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

29 mins ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

41 mins ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

50 mins ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

2 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

2 hours ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

2 hours ago