ಮೈಸೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರುಗಳು ತಮ್ಮ ಮಕ್ಕಳಿಗೆ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ ಎಂದು ಎಂಎಲ್ಸಿ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್ಸಿ ಎಚ್.ವಿಶ್ವನಾಥ್ ಅವರು, ರಾಜಕೀಯ ಗಣ್ಯ ನಾಯಕರು ತಮ್ಮ ತಮ್ಮ ಮಕ್ಕಳನ್ನು ಮುಂದೆ ತರಬೇಕು ಎಂದು ಪಣತೊಟ್ಟಿದ್ದಾರೆ. ಇದರಲ್ಲಿ ಪ್ರಮುಖವಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಇದ್ದಾರೆ. ಈ ನಾಯಕರಿಗೆ ರಾಜ್ಯದ ಹಿತಾಸಕ್ತಿಗಿಂತ ಅವರ ಕೌಟುಂಬಿಕ ಹಿತಾಸಕ್ತಿಯೇ ಮುಖ್ಯ ಎಂದು ವ್ಯಂಗ್ಯವಾಡಿದರು.
ಇವೆರೆಲ್ಲಾ ಜನರ ಕಷ್ಟಗಳಿಗೆ ಸ್ಪಂದಿಸದೇ, ಜನರ ಏಳಿಗೆಗಾಗಿ ಕೆಲಸ ಮಾಡದೇ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಈಗ ನಡೆಯುತ್ತಿರುವ ಎರಡು ಯಾತ್ರೆಗಳಿಂದ ಜನರಿಗೆ ಏನು ಅನುಕೂಲವಿಲ್ಲ. ಆ ಯಾತ್ರೆ ಮಾಡುವುದನ್ನು ಬಿಟ್ಟು ಹಳ್ಳಿ ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದರೆ, ಎಷ್ಟೆಲ್ಲಾ ಪ್ರಯೋಜನವಾಗುತ್ತಿತ್ತು ಎಂದು ಪ್ರಶ್ನೆ ಮಾಡಿದರು.
ಇನ್ನೂ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಮೂರು ಬಿಟ್ಟವರಂತೆ ವರ್ತಿಸುತ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಅವರು ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಿಡಿಕಾರಿದರು.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…