ಮೈಸೂರು ನಗರ

ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲು ಎಂಎಲ್ಸಿ ಎಚ್.ವಿಶ್ವನಾಥ್ ಆಗ್ರಹ

ಮೈಸೂರು : ಮುಡಾದಲ್ಲಿ ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಈಗಾಗಿ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು, ಇಲ್ಲದಿದ್ದರೆ ಹಳ್ಳ ಹಿಡಿಸುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಳ್ಳಿಹಕ್ಕಿ,  ಐಎಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬರುವುದಕ್ಕೂ ಮೊದಲೇ ಮುಡಾ ಅಧ್ಯಕ್ಷ ಮರಿಗೌಡ , ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಸಮರ್ಥಿಸಿಕೊಳ್ಳುತ್ತಿದ್ದಾರೆ.  ತನಿಖೆ ಸಂಸ್ಥೆ ಮೇಲೆ ಗೌರವ ಇಲ್ವಾ..? ಮಹದೇಪ್ಪ ಒಬ್ಬ ಕ್ಯಾಬಿನೆಟ್‌ ಮಿನಿಸ್ಟರ್‌ ಆಗಿ ಈ ರೀತಿ ಹೇಳಿದ್ರೆ ತನಿಖೆ ಯಾವ ರೀತಿ ಮಾಡಬೇಕು. ನೀವು ಮತ್ತು ನಿಮ್ಮ ಕಾಂಗ್ರೆಸ್‌ ಶಾಸಕರು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅನಾವಶ್ಯಕವಾಗಿ ಮಾತಾಡೋದನ್ನ ಮೊದಲು ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದರು.

ಅಲ್ಲದೆ ಮುಡಾ ಅಧ್ಯಕ್ಷ ಮರಿಗೌಡ ಅವನೊಬ್ಬ ದೊಡ್ಡ ಮೂಡ. ಅವನು ನನ್ನ ನೈತಿಕತೆ ಬಗ್ಗೆ ಏನು ಮಾತನಾಡೋದು. ಅದಕ್ಕೆ ಈ ಪ್ರಕರಣ ಸಿಬಿಐಗೆ ವಹಿಸಬೇಕು. ಇಲ್ಲ ಅಂದರೆ ಹಳ್ಳ ಹಿಡಿಸಿ ಬಿಡ್ತಾರೆ. ದಲಿತರ ಭೂಮಿ ಖರೀದಿ ಮಾಡಿ ಮೋಸ ಮಾಡುತ್ತಿದ್ದೀರಾ. ನೀವು ಒಬ್ಬ ಸಮಾಜವಾದಿ ಆದರೆ, ಆ ನಿವೇಶನ ಅವರಿಗೆ ವಾಪಸ್‌ ಮಾಡಿ. ಸುಮಾರು ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

5 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

5 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

5 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

5 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

5 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

5 hours ago