ಮೈಸೂರು : ಮುಡಾದಲ್ಲಿ ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಈಗಾಗಿ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು, ಇಲ್ಲದಿದ್ದರೆ ಹಳ್ಳ ಹಿಡಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಳ್ಳಿಹಕ್ಕಿ, ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬರುವುದಕ್ಕೂ ಮೊದಲೇ ಮುಡಾ ಅಧ್ಯಕ್ಷ ಮರಿಗೌಡ , ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಸಮರ್ಥಿಸಿಕೊಳ್ಳುತ್ತಿದ್ದಾರೆ. ತನಿಖೆ ಸಂಸ್ಥೆ ಮೇಲೆ ಗೌರವ ಇಲ್ವಾ..? ಮಹದೇಪ್ಪ ಒಬ್ಬ ಕ್ಯಾಬಿನೆಟ್ ಮಿನಿಸ್ಟರ್ ಆಗಿ ಈ ರೀತಿ ಹೇಳಿದ್ರೆ ತನಿಖೆ ಯಾವ ರೀತಿ ಮಾಡಬೇಕು. ನೀವು ಮತ್ತು ನಿಮ್ಮ ಕಾಂಗ್ರೆಸ್ ಶಾಸಕರು ತನಿಖೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅನಾವಶ್ಯಕವಾಗಿ ಮಾತಾಡೋದನ್ನ ಮೊದಲು ನಿಲ್ಲಿಸಿ ಎಂದು ವಾಗ್ದಾಳಿ ನಡೆಸಿದರು.
ಅಲ್ಲದೆ ಮುಡಾ ಅಧ್ಯಕ್ಷ ಮರಿಗೌಡ ಅವನೊಬ್ಬ ದೊಡ್ಡ ಮೂಡ. ಅವನು ನನ್ನ ನೈತಿಕತೆ ಬಗ್ಗೆ ಏನು ಮಾತನಾಡೋದು. ಅದಕ್ಕೆ ಈ ಪ್ರಕರಣ ಸಿಬಿಐಗೆ ವಹಿಸಬೇಕು. ಇಲ್ಲ ಅಂದರೆ ಹಳ್ಳ ಹಿಡಿಸಿ ಬಿಡ್ತಾರೆ. ದಲಿತರ ಭೂಮಿ ಖರೀದಿ ಮಾಡಿ ಮೋಸ ಮಾಡುತ್ತಿದ್ದೀರಾ. ನೀವು ಒಬ್ಬ ಸಮಾಜವಾದಿ ಆದರೆ, ಆ ನಿವೇಶನ ಅವರಿಗೆ ವಾಪಸ್ ಮಾಡಿ. ಸುಮಾರು ೧೦ ಸಾವಿರ ಕೋಟಿ ಅಕ್ರಮ ನಡೆದಿದೆ. ಪೊಲೀಸರು ಇದನ್ನ ತನಿಖೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…