ಮೈಸೂರು ನಗರ

ಶ್ರೀರಾಮುಲು ಪರ ಬ್ಯಾಟ್‌ ಬೀಸಿದ ಎಂಎಲ್‌ಸಿ ವಿಶ್ವನಾಥ್‌

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್‌ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌, ಶ್ರೀರಾಮುಲು ಪರ ಬ್ಯಾಟ್‌ ಬೀಸಿದ್ದಾರೆ.

ಈ ಕುರಿತ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ವಾಲ್ಮಿಕಿ ಸಮುದಾಯದ ನಾಯಕ. ಜನಾರ್ಧನ ರೆಡ್ಡಿ ಗೆದ್ದಿದ್ದೇ ಶ್ರೀರಾಮುಲುವಿನಿಂದ ಆತನ ಬಗ್ಗೆ ರೆಡ್ಡಿ ಹೀಗೆಲ್ಲಾ ಲಘುವಾಗಿ ಮಾತನಾಡಬಾರದು. ಗಣಿ ದುಡ್ಡಲ್ಲಿ ರೆಡ್ಡಿ ಗೆದ್ದಿದ್ದಾನೆ. ದುಡ್ಡೇನು ಅವರಪ್ಪನ ಮನೆಯಿಂದ ತಂದಿದ್ದಾ? ಎಂದು ಹೇಳಿದರು.

ಬಿಜೆಪಿ ವರಿಷ್ಠರ ಸಭೆ ವಿಚಾರದ ಬಗ್ಗೆ ಮಾತನಾಡಿ, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲೂ ಇರೋರು ಡಮ್ಮಿ ವರಿಷ್ಠರು. ಯಾರೋ ಹೇಳಿದ್ದನ್ನು ಬಂದು ಹೇಳುವ ವರಿಷ್ಠರು ಇದ್ದಾರೆ. ಸಭೆಯಲ್ಲಿ ಎಲ್ಲಿ ನಾನು ಕೆಲವು ವಿಷಯ ಬಾಯಿ ಬಿಡುತ್ತೇನೋ ಎಂದು ನನ್ನನ್ನು ಬಿಜೆಪಿ ಸಭೆಗೆ ಕರೆಯೋದಿಲ್ಲ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವಿಜಯೇಂದ್ರ ಯಾರು? ಯಡಿಯೂರಪ್ಪ ಯಾರು? ಎಂದು ಎಲ್ಲರಿಗೂ ಗೊತ್ತು. ವಿಜಯೇಂದ್ರಗೆ ಅಧಿಕಾರ ಮಾಡಲು ಯತ್ನಾಳ್ ಗುಂಪು ಬಿಡುತ್ತಿಲ್ಲ. ಆದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕು ಎಂದು ಮಾತನಾಡಿದರು.

ಆಂದೋಲನ ಡೆಸ್ಕ್

Recent Posts

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

15 mins ago

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

1 hour ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

1 hour ago

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

3 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

3 hours ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

3 hours ago