ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಶ್ರೀರಾಮುಲು ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ವಾಲ್ಮಿಕಿ ಸಮುದಾಯದ ನಾಯಕ. ಜನಾರ್ಧನ ರೆಡ್ಡಿ ಗೆದ್ದಿದ್ದೇ ಶ್ರೀರಾಮುಲುವಿನಿಂದ ಆತನ ಬಗ್ಗೆ ರೆಡ್ಡಿ ಹೀಗೆಲ್ಲಾ ಲಘುವಾಗಿ ಮಾತನಾಡಬಾರದು. ಗಣಿ ದುಡ್ಡಲ್ಲಿ ರೆಡ್ಡಿ ಗೆದ್ದಿದ್ದಾನೆ. ದುಡ್ಡೇನು ಅವರಪ್ಪನ ಮನೆಯಿಂದ ತಂದಿದ್ದಾ? ಎಂದು ಹೇಳಿದರು.
ಬಿಜೆಪಿ ವರಿಷ್ಠರ ಸಭೆ ವಿಚಾರದ ಬಗ್ಗೆ ಮಾತನಾಡಿ, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲೂ ಇರೋರು ಡಮ್ಮಿ ವರಿಷ್ಠರು. ಯಾರೋ ಹೇಳಿದ್ದನ್ನು ಬಂದು ಹೇಳುವ ವರಿಷ್ಠರು ಇದ್ದಾರೆ. ಸಭೆಯಲ್ಲಿ ಎಲ್ಲಿ ನಾನು ಕೆಲವು ವಿಷಯ ಬಾಯಿ ಬಿಡುತ್ತೇನೋ ಎಂದು ನನ್ನನ್ನು ಬಿಜೆಪಿ ಸಭೆಗೆ ಕರೆಯೋದಿಲ್ಲ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವಿಜಯೇಂದ್ರ ಯಾರು? ಯಡಿಯೂರಪ್ಪ ಯಾರು? ಎಂದು ಎಲ್ಲರಿಗೂ ಗೊತ್ತು. ವಿಜಯೇಂದ್ರಗೆ ಅಧಿಕಾರ ಮಾಡಲು ಯತ್ನಾಳ್ ಗುಂಪು ಬಿಡುತ್ತಿಲ್ಲ. ಆದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕು ಎಂದು ಮಾತನಾಡಿದರು.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…