ಮೈಸೂರು: ಮಾಜಿ ಸಚಿವ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ್ ರೆಡ್ಡಿ ನಡುವೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಶ್ರೀರಾಮುಲು ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀರಾಮುಲು ವಾಲ್ಮಿಕಿ ಸಮುದಾಯದ ನಾಯಕ. ಜನಾರ್ಧನ ರೆಡ್ಡಿ ಗೆದ್ದಿದ್ದೇ ಶ್ರೀರಾಮುಲುವಿನಿಂದ ಆತನ ಬಗ್ಗೆ ರೆಡ್ಡಿ ಹೀಗೆಲ್ಲಾ ಲಘುವಾಗಿ ಮಾತನಾಡಬಾರದು. ಗಣಿ ದುಡ್ಡಲ್ಲಿ ರೆಡ್ಡಿ ಗೆದ್ದಿದ್ದಾನೆ. ದುಡ್ಡೇನು ಅವರಪ್ಪನ ಮನೆಯಿಂದ ತಂದಿದ್ದಾ? ಎಂದು ಹೇಳಿದರು.
ಬಿಜೆಪಿ ವರಿಷ್ಠರ ಸಭೆ ವಿಚಾರದ ಬಗ್ಗೆ ಮಾತನಾಡಿ, ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದಲ್ಲೂ ಇರೋರು ಡಮ್ಮಿ ವರಿಷ್ಠರು. ಯಾರೋ ಹೇಳಿದ್ದನ್ನು ಬಂದು ಹೇಳುವ ವರಿಷ್ಠರು ಇದ್ದಾರೆ. ಸಭೆಯಲ್ಲಿ ಎಲ್ಲಿ ನಾನು ಕೆಲವು ವಿಷಯ ಬಾಯಿ ಬಿಡುತ್ತೇನೋ ಎಂದು ನನ್ನನ್ನು ಬಿಜೆಪಿ ಸಭೆಗೆ ಕರೆಯೋದಿಲ್ಲ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವಿಜಯೇಂದ್ರ ಯಾರು? ಯಡಿಯೂರಪ್ಪ ಯಾರು? ಎಂದು ಎಲ್ಲರಿಗೂ ಗೊತ್ತು. ವಿಜಯೇಂದ್ರಗೆ ಅಧಿಕಾರ ಮಾಡಲು ಯತ್ನಾಳ್ ಗುಂಪು ಬಿಡುತ್ತಿಲ್ಲ. ಆದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕು ಎಂದು ಮಾತನಾಡಿದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…