ಮೈಸೂರು : ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಪಟ್ಟಂತೆ ಇಂದು ಸುದ್ದಿಗೋಷ್ಠಿ ನಡೆಸಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ಪಷ್ಟನೆ ನೀಡಿದ್ದಾರೆ.
ʻ೨೦೦೧ ರಲ್ಲಿ ನನ್ನ ಮಡದಿ ಹೆಸರಿನಲ್ಲಿ ನಿವೇಶನಕ್ಕೆ ಅರ್ಜಿ ಹಾಕಿದ್ದೇವು. ಆದರೆ ೨೦೨೨ ರಲ್ಲಿ ಒಂದು ನಿವೇಶನ ಮಂಜೂರಾಗಿ ಆಗಿದೆ. ಅಲ್ಲಿ ವರುಣ ನಾಲೆ ಹಾದುಹೋಗಿದೆ. ಅಲ್ಲಿಯ ನಿವೇಶನ ಹಳ್ಳಬಿದ್ದು ಸರಿಯಿಲ್ಲದ ಕಾರಣ ಅದರ ಬದಲಾಗಿ ಅಲ್ಲೆ ಅದೇ ಬಡಾವಣೆಯಲ್ಲಿ ಬೇರೆಡೆ ೧೨*೧೮ ಮೀಟರ್ ಬದಲಿ ನಿವೇಶನ ಕೊಟ್ಟಿದ್ದಾರೆ. ಅಲ್ಲೆ ಕೊಟ್ಟಿದ್ದಾರೆ ಹೊರತು ಬೇರೆ ಬಡಾವಣೆಯಲ್ಲಿ ಕೊಟ್ಟಿಲ್ಲ. ಇದರ ಬಗ್ಗೆ ಮುಡಾ ಸಭೆಯಲ್ಲಿ ಅನುಮೋದನೆ ಆಗಿದೆ ಎಂದು ಸಾಕ್ಷ್ಯಧಾರ ಮುಂದಿಟ್ಟು ಸ್ಪಷ್ಟನೆ ಕೊಟ್ಟಿದ್ದಾರೆ.
ಇನ್ನು ವಿಶ್ವನಾಥ್ ರಾಜಕೀಯ ದಿವಾಳೆ ಎಂಬ ಹರೀಶ್ ಗೌಡ, ಮರೀಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಕೀಯ ದಿವಾಳಿ ಆಗಿಲ್ಲ. ದಿವಾಳಿ ಆಗಿರೋರು ನೀವು. ನಿವೇಲ್ಲಾ ಸೇರಿ ಸಿದ್ದರಾಮಯ್ಯ ಅವರನ್ನ ದಿವಾಳಿ ಮಾಡುತ್ತಿದ್ದೀರಾ. ನಾನು ಈಗಲೂ ಹೇಳುತ್ತೇನೆ ಪ್ರಾಮಾಣಿಕವಾಗಿ ನಾನು ಬುದುಕಿದ್ದೇನೆ ಹೊರತು ನಿಮ್ಮ ಹಾಗೆ ಬದುಕಿಲ್ಲ ಎಂದು ವಾಗ್ದಾಳಿ ನಡೆಸಿ ತಿರುಗೇಟು ಕೊಟ್ಟಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…