ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ದರ್ಶನದ ವೇಳೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್‌ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್‌ ರಚನೆ ಮಾಡಲು ಮುಂದಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಪ್ಲಾಸ್ಟಿಕ್‌ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನದ ವೇಳೆ ಮೊಬೈಲ್‌ ನಿಷೇಧ ಮಾಡಲಾಗಿದೆ. ರಾಜ್ಯದ ಎಲ್ಲಾ ದೇವಾಲಯಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಬೆಟ್ಟದಲ್ಲಿ ಸುರಕ್ಷತೆಗೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಚಾಮುಂಡಿಬೆಟ್ಟಕ್ಕೆ ಸಾವಿರಾರು ಜನ ಬರುತ್ತಾರೆ. ಆದ್ದರಿಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಬಾಕಿಯಿರುವ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರ ಪ್ರಸಾದ ಯೋಜನೆ ಜಾರಿ ಮಾಡಲಾಗುತ್ತದೆ. ಈ ಮೂಲಕ ದಾಸೋಹ ಭವನದಲ್ಲಿ ಊಟದ ವ್ಯವಸ್ಥೆ ಸುಧಾರಣೆ ಮಾಡಲಾಗುತ್ತದೆ. ರುಚಿಕರ ಊಟ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

4 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

5 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

12 hours ago