ಮೈಸೂರು: ಮೈಸೂರು ರಾಜಮನೆತನಕ್ಕೆ ರಾಜ್ಯ ಸರ್ಕಾರ ರಾಯಲ್ ಸ್ಟೇಟಸ್ ನೀಡಬೇಕು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ಹಾಗೂ ಆಡಳಿತ ಅದರ ಪಾಡಿಗೆ ಅದು ನಡೆಯಲಿ. ಆದರೆ ರಾಜಮನೆತನಕ್ಕೆ ಗೌರವ ಸಲ್ಲಿಸುವ ವ್ಯವಸ್ಥೆ ಆಗಬೇಕು ಎಂದರು.
ಕೆಲ ದೇಶಗಳಲ್ಲಿ ರಾಜಮನೆತನಕ್ಕೆ ಉನ್ನತ ಸ್ಥಾನ ನೀಡಲಾಗಿದೆ. ರಾಜರ ವಿಶೇಷ ಸ್ಥಾನಮಾನ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಆದರೆ ನಮ್ಮ ರಾಜ್ಯ ಹಾಗೂ ದೇಶದಲ್ಲಿ ಅವರನ್ನು ಗೌರವಿಸುವ ದೊಡ್ಡ ಹೃದಯಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಶೇಕಡಾ 5 ರಿಂದ ಶೇಕಡಾ 6ರಷ್ಟು ಆರೋಗ್ಯ ಕ್ಷೇತ್ರಕ್ಕೆ ವೆಚ್ಚ ಮಾಡಲಾಗುತ್ತಿತ್ತು. ಶಿಕ್ಷಣ, ಆರೋಗ್ಯ ಮತ್ತು ಇತರೆ ಕ್ಷೇತ್ರಗಳಿಗೆ ಅನೇಕ ಕೊಡುಗೆ ನೀಡಿದ ಅರಸು ಮನೆತನಕ್ಕೆ ನಮ್ಮ ರಾಜ್ಯದಲ್ಲಾದರೂ ವಿಶೇಷ ಸ್ಥಾನಮಾನ ದೊರೆಯಲಿ ಎಂದರು.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…