ಮೈಸೂರು ನಗರ

ಇಸ್ರೋಗೆ ಅಭಿನಂದನೆ ಸಲ್ಲಿಸಿದ ಸಂಸದ ಯದುವೀರ್‌

ಮೈಸೂರು: ಇಸ್ರೋ ಸಂಸ್ಥೆ ಹಾಗೂ ಯುರೋಪಿನ್‌ ಬಾಹ್ಯಾಕಾಶ ಸಂಸ್ಥೆಯೂ ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತೀಯ ಬಾಹ್ಯಾಕಾಶ ಕೇಂದ್ರ(ಇಸ್ರೋ) ಹಾಗೂ ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆಯ (ಇಎಸ್ಎ) ಜಂಟಿಯಾಗಿ ಪ್ರೋಬಾ-3 ನೌಕೆಯನ್ನು ನಭಕ್ಕೆ ಯಶಸ್ವಿಯಾಗಿ ಹಾರಿಸಿದೆ. ಪಿಎಸ್ಎಲ್ವಿ-ಸಿ60 ರಾಕೆಟ್ 220ಕೆ.ಜಿ ತೂಕದ ಎರಡು ಸ್ಪೇಡೆಕ್ಸ್ ಉಪಗ್ರಹ ಮತ್ತು 24 ಪೇಲೋಡ್ಗಳನ್ನು ಹೊಂದಿರುವ ಪಿಒಇಎಂ-4 ಅನ್ನು ನಿಗದಿತ ಕಕ್ಷೆಗೆ ಸೇರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಕಕ್ಷೆಯಲ್ಲಿ ಬಾಹ್ಯಾಕಾಶ ನೌಕೆಗಳ ‘ಡಾಕಿಂಗ್’ ಮತ್ತು ‘ಅನ್ಡಾಕಿಂಗ್’ ನಡೆಸುವ ಸಾಮರ್ಥ್ಯವನ್ನು ಪ್ರದರ್ಶಿಸುವ ಮಹತ್ತರ ಯೋಜನೆ ಇದಾಗಿದೆ. ಅಮೆರಿಕ, ರಷ್ಯಾ ಮತ್ತು ಚೀನಾ ಮಾತ್ರ ಬಾಹ್ಯಾಕಾಶ ನೌಕೆಗಳ ‘ಡಾಕಿಂಗ್’ ತಂತ್ರಜ್ಞಾನವನ್ನು ಹೊಂದಿರುವ ದೇಶಗಳಾಗಿವೆ. ಈ ಸಾಲಿಗೆ ಇಂದು ಭಾರತವು ಸೇರ್ಪಡೆಯಾಗಲಿರುವುದು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago