Mysore
27
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಪೊಲೀಸರ ವೈಫಲ್ಯದ ಬಗ್ಗೆ ಸಂಸತ್‌ನಲ್ಲಿ ಗಮನಸೆಳೆದ ಸಂಸದ ಯದುವೀರ್‌

MP Yaduveer draws attention to police failure in Parliament

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಕಾ ಘಟಕದ ಮೇಲೆ ನಡೆದಿರುವ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪೊಲೀಸರ ವೈಫಲ್ಯದ ಬಗ್ಗೆ ಮೈಸೂರು- ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದರು.

ಸಂಸತ್‌ನಲ್ಲಿ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು ಮಾಡಿದ್ದಲ್ಲದೆ, ಪೊಲೀಸ್ ವೈಫಲ್ಯದ ಕುರಿತು ಸಂಸದ ಯದುವೀರ್ ಮೈಸೂರಿನಲ್ಲಿ ಅನಧಿಕೃತ ಡ್ರಗ್ಸ್ ಜಾಲದ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸಾಂಸ್ಕೃತಿಕ ನಗರಿ ಎಂದು ಹೆಸರು ವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿ 390 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಹಾಗೆಯೇ ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗುಪ್ತಚರ ವಿಭಾಗವು ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ ಯದುವೀರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಡ್ರಗ್ಸ್ ವಶ ಪ್ರಕರಣ ಕುರಿತು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಇತ್ತೀಚೆಗೆ ಡ್ರಗ್ಸ್ ಜಾಲ ಪತ್ತೆಯಾಗಿತ್ತು. ರಾಜ್ಯದ ಮಾಹಿತಿ-ತಂತ್ರಜ್ಞಾನ ಸಚಿವರು ಆ ಪ್ರಕರಣದಲ್ಲಿ ತೀವ್ರ ಆಸಕ್ತಿಯನ್ನು ತೋರಿದ್ದರು ಎಂದು ಲೋಕಸಭೆಯಲ್ಲಿ ಹೇಳುವ ಮೂಲಕ ಉನ್ನತಮಟ್ಟದ ತನಿಖೆಗೆ ಒತ್ತಾಯಿಸಿದರು.

Tags:
error: Content is protected !!