ಮೈಸೂರು ನಗರ

ಪೊಲೀಸರ ವೈಫಲ್ಯದ ಬಗ್ಗೆ ಸಂಸತ್‌ನಲ್ಲಿ ಗಮನಸೆಳೆದ ಸಂಸದ ಯದುವೀರ್‌

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಎಂಡಿಎಂಎ ಮಾದಕ ದ್ರವ್ಯ ತಯಾರಿಕಾ ಘಟಕದ ಮೇಲೆ ನಡೆದಿರುವ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪೊಲೀಸರ ವೈಫಲ್ಯದ ಬಗ್ಗೆ ಮೈಸೂರು- ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದರು.

ಸಂಸತ್‌ನಲ್ಲಿ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು ಮಾಡಿದ್ದಲ್ಲದೆ, ಪೊಲೀಸ್ ವೈಫಲ್ಯದ ಕುರಿತು ಸಂಸದ ಯದುವೀರ್ ಮೈಸೂರಿನಲ್ಲಿ ಅನಧಿಕೃತ ಡ್ರಗ್ಸ್ ಜಾಲದ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸಾಂಸ್ಕೃತಿಕ ನಗರಿ ಎಂದು ಹೆಸರು ವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿ 390 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಹಾಗೆಯೇ ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗುಪ್ತಚರ ವಿಭಾಗವು ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದ ಯದುವೀರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಡ್ರಗ್ಸ್ ವಶ ಪ್ರಕರಣ ಕುರಿತು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಇತ್ತೀಚೆಗೆ ಡ್ರಗ್ಸ್ ಜಾಲ ಪತ್ತೆಯಾಗಿತ್ತು. ರಾಜ್ಯದ ಮಾಹಿತಿ-ತಂತ್ರಜ್ಞಾನ ಸಚಿವರು ಆ ಪ್ರಕರಣದಲ್ಲಿ ತೀವ್ರ ಆಸಕ್ತಿಯನ್ನು ತೋರಿದ್ದರು ಎಂದು ಲೋಕಸಭೆಯಲ್ಲಿ ಹೇಳುವ ಮೂಲಕ ಉನ್ನತಮಟ್ಟದ ತನಿಖೆಗೆ ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago