ಮೈಸೂರು ನಗರ

ಮ್ಯಾರಥಾನ್‌ನಲ್ಲಿ ಮೈಸೂರಿಗರು ಹೆಚ್ಚಾಗಿ ಪಾಲ್ಗೊಳ್ಳಿ: ಸಂಸದ ಯದುವೀರ್ ಒಡೆಯರ್‌ ಮನವಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.

ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗುವ ಮೂಲಕ ಮ್ಯಾರಥಾನ್‌ನಲ್ಲಿ ಭಾಗಿಯಾಗಿದ್ದವರಿಗೆ ಪ್ರೋತ್ಸಾಹ ನೀಡಿದರು.

ಇಂದು ಬೆಳಗ್ಗೆ ನಡೆದ ಮ್ಯಾರಥಾನ್ ಮೈಸೂರಿನ ನಜರ್ಬಾದ್ ನಲ್ಲಿರುವ ಅಂಚೆ ಇಲಾಖೆಯ ಮುಖ್ಯ ಕಚೇರಿಯಿಂದ ಚಾಮುಂಡಿ ಬೆಟ್ಟ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಹೊರಡಲು ವ್ಯವಸ್ಥೆ ಮಾಡಲಾಗಿತ್ತು. ಮ್ಯಾರಥಾನ್‌ನಲ್ಲಿ ಮೈಸೂರಿಗರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ವಿವಿಧ ವಯೋಮಾನದವರು ಭಾಗಿಯಾಗಿದ್ದದರು.

ಇದನ್ನು ಓದಿ: ಆರ್‌ಎಸ್‌ಎಸ್‌ಗೆ ದೇಣಿಗೆ ಕೊಡುತ್ತಿರುವವರು ಯಾರು?: ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಯದುವೀರ್ ಒಡೆಯರ್‌ ಅವರು, ಮೈಸೂರಿನಲ್ಲಿ ಮ್ಯಾರಥಾನ್ ಆಯೋಜಿಸರುವುದು ಸಂತಸವಾಗಿದೆ. ಈ ಮ್ಯಾರಥಾನ್‌ನಲ್ಲಿ ಭಾಗಿಯಾದ ಎಲ್ಲರಿಗೂ ಅಭಿನಂದನೆ ತಿಳಿಸುತ್ತೇನೆ. ಇಂತಹ ಒಳ್ಳೆಯ ಕ್ರೀಡಾ ಹಾಗೂ ವ್ಯಾಯಾಮಕ್ಕೆ ಪ್ರೋತ್ಸಾಹ ನೀಡುತ್ತಿರುವ ಅಂಚೆ ಇಲಾಖೆಗೂ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಪ್ರೋತ್ಸಾಹದ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಜನರು ಭಾಗಿಯಾಗಿದ್ದಾರೆ. ಪ್ರತಿಯೊಬ್ಬರೂ ತಮ್ಮ ಅರೋಗ್ಯಯುತ ಜೀವನ ನಡೆಸಲು ಯೋಗ, ವ್ಯಾಯಾಮಗಳು ಮುಖ್ಯ ಎಂದು ತಿಳಿಸಿದರು.

ನಂತರ ಮಾತನಾಡಿದ ಅಂಚೆ ಇಲಾಖೆಯ ರಾಜ್ಯ ಮುಖ್ಯ ಚೀಫ್ ಪೋಸ್ಟ್ ಮಾಸ್ಟರ್ ಜೆನರಲ್ ಪ್ರಕಾಶ್ ಅವರು, ಪ್ರಥಮ ಬಾರಿಗೆ ಮೈಸೂರಿನಲ್ಲಿ ಮ್ಯಾರಥಾನ್‌ ಆಯೋಜಿಸಿದ್ದೇವೆ. ಫಿಟ್ ಇಂಡಿಯಾ ಮೂವ್‌ಮೆಂಟ್ ಮೂಲಕ ಆರೋಗ್ಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚು ಒತ್ತು ನೀಡುತ್ತಿದ್ದಾರೆ. ಇಂದಿನ ಮ್ಯಾರಥಾನ್ ಕಾರ್ಯಕ್ರಮವು ಫಿಟ್ ಇಂಡಿಯಾದ ಒಂದು ಭಾಗವಾಗಿದೆ.

ಅದರ ಜೊತೆಗೆ ಅಂಚೆ ಇಲಾಖೆಯ ಉತ್ಪನ್ನಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಅಂಚೆ ಇಲಾಖೆ ಹೊಸದಾಗಿ ಪರಿಚಯಿಸಿರುವ ಅಂಚೆ ಇಲಾಖೆಯ ಆಪ್ ಬಗ್ಗೆ ಜನರಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ. ಈ ಆಪ್ ಮೂಲಕ ಜನರು ಮನೆಯಲ್ಲೇ ಕುಳಿತು ಸೇವೆ ಪಡೆದುಕೊಳ್ಳಬಹುದು. ಎಲ್ಲಾ ಅಂಚೆ ವ್ಯವಹಾರವನ್ನು ಜನರು ಮನೆಯಲ್ಲೇ ಕುಳಿತು ವ್ಯವಹರಿಸಬಹುದು, ಇಂದಿನ ಮ್ಯಾರಥಾನ್‌ನಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

4 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

4 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

5 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

5 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

5 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

5 hours ago